ADVERTISEMENT

ಮನೆಯಲ್ಲೇ ಗುರುಪೂರ್ಣಿಮೆ ಆಚರಿಸಿ: ಬಸವಲಿಂಗ ಅವಧೂತರು

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 16:17 IST
Last Updated 3 ಜುಲೈ 2020, 16:17 IST
ಬಸವಲಿಂಗ ಅವಧೂತರು
ಬಸವಲಿಂಗ ಅವಧೂತರು   

ಬೀದರ್: ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಭಕ್ತರು ಈ ಬಾರಿ ಗುರುಪೂರ್ಣಿಮೆ ಮನೆಯಲ್ಲೇ ಆಚರಿಸಬೇಕು ಎಂದು ನೆರೆಯ ತೆಲಂಗಾಣದ ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದ ಡಾ. ಬಸವಲಿಂಗ ಅವಧೂತರು ಹೇಳಿದ್ದಾರೆ.

ಜುಲೈ 5 ರಂದು ಗುರುಪೂರ್ಣಿಮೆ ಇದೆ. ಬಹಳಷ್ಟು ಭಕ್ತರು ಗುರುಗಳಿಗೆ ಗೌರವ ಸಲ್ಲಿಸಲು ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಆದರೆ, ಕೊರೊನಾ ಸೋಂಕು ತಡೆಗೆ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕಿರುವುದರಿಂದ ಅವರವರ ಮನೆಗಳಲ್ಲೇ ಪೂಜೆ, ಪ್ರಾರ್ಥನೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಭಕ್ತರು ಕೊರೊನಾ ಮುಕ್ತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಬೇಕು. ಬರುವ ದಿನಗಳಲ್ಲಿ ದೇವರು ಮಹಾಮಾರಿ ಕೊರೊನಾದ ಸಂಕಟವನ್ನು ನಿವಾರಿಸಲಿದ್ದಾನೆ ಎಂದು ಹೇಳಿದ್ದಾರೆ.

ADVERTISEMENT

ಕೊರೊನಾ ನಿಯಂತ್ರಿಸಲು ಕೇಂದ್ರ ಹಾಗೂ ಆಯಾ ರಾಜ್ಯ ಸರ್ಕಾರಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸೋಂಕಿಗೆ ಪರಿಹಾರ ಕಂಡುಕೊಳ್ಳುವುದಕ್ಕಾಗಿ ಲಸಿಕೆ ಸಂಶೋಧನೆಯೂ ತೀವ್ರಗತಿಯಲ್ಲಿ ನಡೆದಿದೆ. ಅದು ಬರುವವರೆಗೂ ಹೆಚ್ಚು ಎಚ್ಚರ ವಹಿಸಬೇಕು. ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಸಲಹೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.