ಚಿಟಗುಪ್ಪ: ‘ಕೇಂದ್ರ, ರಾಜ್ಯ ಸರ್ಕಾರಗಳ ಜನಪರ ಯೋಜನೆಗಳ ಸದ್ಬಳಕೆಗೆ ಕಾರ್ಯಕರ್ತರು ಶ್ರಮಿಸಬೇಕು’ ಎಂದು ಬಿಜೆಪಿ ಒಬಿಸಿ ಜಿಲ್ಲಾ ಘಟಕದ ಅಧ್ಯಕ್ಷ ಅನೀಲ ಭುಸಾರೆ ಹೇಳಿದರು.
ತಾಲ್ಲೂಕಿನ ಮನ್ನಾಎಖ್ಖೇಳಿ ಗ್ರಾಮದಲ್ಲಿ ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ನಡೆದ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾಗರಿಕರು ಸರ್ಕಾರದ ಬಹುತೇಕ ಯೋಜನೆಗಳ ಮಾಹಿತಿ ಇಲ್ಲದೆ ಇರುವುದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಅಧಿಕಾರಿಗಳು ಸಮರ್ಪಕವಾಗಿ ಮಾಹಿತಿ ಒದಗಿಸಬೇಕು ಎಂದರು.
ಅರಿಹಂತ ಸವಳೆ, ಮಂಡಲ ಅಧ್ಯಕ್ಷ ರಾಝರೆಡ್ಡಿ ಶಾಬಾದ್, ಬಿಜೆಪಿ ಒಬಿಸಿ ತಾಲ್ಲೂಕು ಘಟಕದ ಅಧ್ಯಕ್ಷ ರಾಜಕುಮಾರ ಪಂಚಾಳ, ಸುರೇಶ ಮಾಶೆಟ್ಟಿ, ಘಾಳೆಪ್ಪ ಚಟ್ನಳ್ಳಿ, ಝರೆಪ್ಪ ಹಂದಿಕೇರಾ, ಸಚಿನ್ ಮಡಿವಾಳ, ಓಂಪ್ರಕಾಶ್ ಮಜ್ಜಗೆ, ವಿನೋದ್ ಕೋಟೆ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.