ADVERTISEMENT

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧ

ದಲಿತ ಸಂಘಟನೆಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 5:53 IST
Last Updated 11 ಜುಲೈ 2020, 5:53 IST
ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಕೈಬಿಡಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೀದರ್‌ನಲ್ಲಿ ಶುಕ್ರವಾರ ಪ್ರತಿಭಟನಾ ರ‍್ಯಾಲಿ ನಡೆಸಿದರು
ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಕೈಬಿಡಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೀದರ್‌ನಲ್ಲಿ ಶುಕ್ರವಾರ ಪ್ರತಿಭಟನಾ ರ‍್ಯಾಲಿ ನಡೆಸಿದರು   

ಬೀದರ್: ರಾಜ್ಯ ಸರ್ಕಾರ ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಒಕ್ಕೂಟದ ಪದಾಧಿಕಾರಿಗಳು ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ರಾಜ್ಯ ಸರ್ಕಾರ, ಭೂ ರಹಿತ ರೈತರು, ಕೃಷಿ ಕೂಲಿ ಕಾರ್ಮಿಕರಿಗೆ ಭೂಮಿ ನೀಡಲು ಇರುವ ಕರ್ನಾಟಕ ಭೂ ಸುಧಾರಣೆ ಕಾಯ್ದೆ ಅಧಿನಿಯಮ 1961 ಮತ್ತು 1974 ಅನ್ನು ಅನುಷ್ಠಾನಗೊಳಿಸದೆ, ಬಂಡವಾಳ ಶಾಹಿ, ಅಧಿಕಾರ ಶಾಹಿ ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಗೆ ಭೂಮಿ ನೀಡಲು ಕಾಯ್ದೆಗೆ ತಿದ್ದಪಡಿ ತರಲು ಹೊರಟಿದೆ. ಕಾಯ್ದೆ ತಿದ್ದುಪಡಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ADVERTISEMENT

ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ, ದಲಿತ ಸಂಘರ್ಷ ಸಮಿತಿ (ಭೀಮವಾದ)ಯ ಜಿಲ್ಲಾ ಸಂಚಾಲಕ ಕಲ್ಯಾಣರಾವ್ ಭೊಸ್ಲೆ, ದಲಿತ ಸಂಘರ್ಷ ಸಮಿತಿ (ಭೀಮ ಮಾರ್ಗ) ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಚಿಟ್ಟಾ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಅರುಣ ಕುದರೆ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಬಾಬುರಾವ್ ಪಾಸ್ವಾನ್, ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಪತರಾವ್ ದೀನೆ, ಅಂಬೇಡ್ಕರ್ ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ. ಮುದಾಳೆ, ನಾಗೇಂದ್ರ ಎಸ್. ದಂಡೆ, ರವಿಕುಮಾರ ವಾಘಮಾರೆ, ಓಂಪ್ರಕಾಶ ಭಾವಿಕಟ್ಟಿ, ಶಿವಕುಮಾರ ನೀಲಿಕಟ್ಟಿ, ಅಂಬಾದಾಸ ಗಾಯಕವಾಡ, ಬಾಬುರಾವ್ ಕೌಠಾ, ಶಾಲಿವಾನ ಬಡಿಗೇರ, ಬಾಬುರಾವ್ ಮಿಠಾರೆ, ಅಭಿ ಕಾಳೆ, ಲಕ್ಷ್ಮಿ ಕಾಂಬಳೆ, ಪ್ರಶಾಂತ ಭಾವಿಕಟ್ಟಿ, ಜೀವನ ಬುಡ್ತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.