ಬೀದರ್: ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಆಪ್ತ ಸಹಾಯಕನ ವಿರುದ್ಧ ವಂಚನೆ ಪ್ರಕರಣ ದಾಖಲಾದ ಕಾರಣ ಚವಾಣ್ ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಒತ್ತಾಯಿಸಿದ್ದಾರೆ.
ಸಚಿವರ ಆಪ್ತ ಸಹಾಯಕ ಉದ್ಯೋಗ ನೀಡುವುದಾಗಿ ಸುಳ್ಳು ಪ್ರಕಟಣೆ ಹೊರಡಿಸಿ ನಿರುದ್ಯೋಗಿಗಳಿಗೆ ಮೋಸ ಮಾಡಲು ಪ್ರಯತ್ನಿಸಿದ್ದಾರೆ. ಇದರಲ್ಲಿ ಸಚಿವರ ಹಸ್ತ ಕ್ಷೇಪ ಇದೆ ಎಂದು ಹೇಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.