ADVERTISEMENT

ಕೃಷ್ಣ- ರಾಧೆ ವೇಷ ಧರಿಸಿ ಸಂಭ್ರಮಿಸಿದ ಮಕ್ಕಳು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 13:47 IST
Last Updated 18 ಆಗಸ್ಟ್ 2022, 13:47 IST
ಬೀದರ್‌ನ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಮಕ್ಕಳು ಕೃಷ್ಣ ಹಾಗೂ ರಾಧೆಯರ ವೇಷ ಧರಿಸಿ ಸಂಭ್ರಮಿಸಿದರು
ಬೀದರ್‌ನ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಮಕ್ಕಳು ಕೃಷ್ಣ ಹಾಗೂ ರಾಧೆಯರ ವೇಷ ಧರಿಸಿ ಸಂಭ್ರಮಿಸಿದರು   

ಬೀದರ್: ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಗುರುವಾರ ಇಲ್ಲಿಯ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಕ್ಕಳು ಕೃಷ್ಣ ಹಾಗೂ ರಾಧೆಯರ ವೇಷ ಧರಿಸಿ ಸಂಭ್ರಮಿಸಿದರು.

ತಲೆ ಮೇಲೆ ನವಿಲು ಗರಿ ಇದ್ದ ಕಿರೀಟ ತೊಟ್ಟಿದ್ದ ಕೃಷ್ಣ ವೇಷಧಾರಿಗಳು ಕೈಯಲ್ಲಿ ಕೊಳಲು ಹಿಡಿದುಕೊಂಡಿದ್ದರು. ರಾಧೆ ವೇಷಧಾರಿಗಳು ಬಿಂದಿಗೆ ಹಿಡಿದುಕೊಂಡಿದ್ದರು.

ಹಬ್ಬ, ಹರಿದಿನಗಳು, ಮಹಾ ಪುರುಷರ ಜಯಂತಿ ಆಚರಣೆ ಜತೆಗೆ ಶಾಲೆಯಲ್ಲಿ ಮಕ್ಕಳಿಗೆ ಭಾರತೀಯ ಸಂಸ್ಕೃತಿ ಆಧಾರಿತ ಶಿಕ್ಷಣ ಕೊಡಲಾಗುತ್ತಿದೆ ಎಂದು ಋಷಿಕೇಶ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಂತೋಷ ಮಂಗಳೂರೆ ಹೇಳಿದರು.

ADVERTISEMENT

ಪ್ರೌಢಶಾಲೆ ಮುಖ್ಯಶಿಕ್ಷಕಿ ಈಶ್ವರಿ ಬೇಲೂರೆ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಬಸವರಾಜ ಮುಗುಟಾಪುರೆ, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.