ADVERTISEMENT

ತಾಪಂ ಅಧ್ಯಕ್ಷ– ಟಿಎಚ್‌ಒ ಮಧ್ಯೆ ವಾಗ್ವಾದ: ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 10 ಮೇ 2021, 6:11 IST
Last Updated 10 ಮೇ 2021, 6:11 IST

ಹುಮನಾಬಾದ್: ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಮೇಶ ಡಾಕುಳಗಿ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಿವಕುಮಾರ ನಡುವೆ ವಾಗ್ವಾದ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಭಾನುವಾರ ನಡೆದಿದೆ.

ತಾಲ್ಲೂಕು ಪಂಚಾಯಿತಿಯ ಕಚೇರಿಯಲ್ಲಿ ಅಧ್ಯಕ್ಷ, ಸದಸ್ಯರ ಅವಧಿ ಪೂರ್ಣಗೊಂಡ ಕಾರಣ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೂ ಮೊದಲು ತಾ.ಪಂ ಅಧ್ಯಕ್ಷ ರಮೇಶ ಡಾಕುಳಗಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಿವಕುಮಾರ ಅವರಿಗೆ ‘ನೀವು ಏಕೆ ನನ್ನ ಕರೆ ಸ್ವೀಕರಿಸುತ್ತಿಲ್ಲ’ ಎಂದು ಪ್ರಶ್ನಿಸಿದ್ದಾರೆ. ‘ದಿನೇ ದಿನೇ ಕೋವಿಡ್ ಪ್ರಕರಣ ಹೆಚ್ಚಾಗುತ್ತಿವೆ. ಹಾಗಾಗಿ ಸಭೆಗಳಲ್ಲಿ ಕೆಲವು ಕರೆಗಳನ್ನು ಸ್ಪಂದಿಸಲು ಆಗುತ್ತಿಲ್ಲ. ಜನರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ವೈದ್ಯರು ಹಾಗೂ ಸಿಬ್ಬಂದಿ ತಮ್ಮ ಶಕ್ತಿ ಮೀರಿ ಕಾರ್ಯ ಮಾಡುತ್ತಿದ್ದಾರೆ’ ಎನ್ನುತ್ತಿದ್ದಂತೆ ಅಧ್ಯಕ್ಷರು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎನ್ನಲಾಗಿದೆ.

ADVERTISEMENT

ಇದರಿಂದಾಗಿ ತಾಲ್ಲೂಕು ಆರೋಗ್ಯ ಅಧಿಕಾರಿ ಸಭೆಯಿಂದ ಹೊರನಡೆದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.