ADVERTISEMENT

ಕ. ಮಹಿಳಾ ಪ್ರಮುಖರ ಸಭೆ 6,7ಕ್ಕೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2021, 13:29 IST
Last Updated 4 ನವೆಂಬರ್ 2021, 13:29 IST
ರೇವಣಸಿದ್ದಪ್ಪ ಜಲಾದೆ
ರೇವಣಸಿದ್ದಪ್ಪ ಜಲಾದೆ   

ಬೀದರ್: ಸೇಡಂನ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆ ಸಂಚಾಲಿತ ವಿಕಾಸ ಅಕಾಡೆಮಿಯ ಕಲ್ಯಾಣ ಕರ್ನಾಟಕ ಮಹಿಳಾ ಪ್ರಮುಖರ ಸಭೆ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪದಲ್ಲಿ ನ. 6 ಮತ್ತು 7 ರಂದು ನಡೆಯಲಿದೆ ಎಂದು ವಿಕಾಸ ಅಕಾಡೆಮಿಯ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.

ರಾಜ್ಯಸಭೆ ಮಾಜಿ ಸದಸ್ಯರೂ ಆದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಹಾಗೂ ಚಿಂತಕಿ ಲೀಲಾ ಕಾರಟಗಿ ಅವರು ಮಾರ್ಗದರ್ಶನ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಬಸವರಾಜ ಪಾಟೀಲ ಅವರು ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಅವಿತರ ಶ್ರಮಿಸುತ್ತಿದ್ದಾರೆ. ಸಭೆಯಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.