ಬೀದರ್: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಬರುವ ಜೂನ್ ತಿಂಗಳಲ್ಲಿ ವಿಶೇಷ ಘಟಕ ಯೋಜನೆಯಡಿ ರಾಜ್ಯ ಮಟ್ಟದ ಐದು ದಿನಗಳ ಮಾಧ್ಯಮ ಪ್ರವೇಶಿಕ: ಬರಹ ಮತ್ತು ಸಂವಹನ ಕೌಶಲ ಕಮ್ಮಟ ಆಯೋಜಿಸಿದೆ.
ಆಸಕ್ತಿಯುಳ್ಳ 20ರಿಂದ 50 ವರ್ಷದೊಳಗಿನ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಮತ್ತಿತರ ವಿವರವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ http://karnatakasahithyaacademy.orgವೆಬ್ಸೈಟ್ದಿಂದ ಪಡೆಯಬೇಕು ಎಂದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.