ADVERTISEMENT

ಸಂಗೀತ, ನೃತ್ಯದಿಂದ ಏಕಾಗ್ರತೆ

ಪ್ರೊಬೇಷನರಿ ಐಎಎಸ್ ಅಧಿಕಾರಿ ಕೀರ್ತನಾ ಅಭಿಮತ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 15:46 IST
Last Updated 2 ನವೆಂಬರ್ 2021, 15:46 IST
ಬೀದರ್‌ನಲ್ಲಿ ರಾಜ್ಯ ಮಟ್ಟದ ಕಲಾ ಸಂಭ್ರಮೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಪ್ರೊಬೇಷನರಿ ಐಎಎಸ್ ಅಧಿಕಾರಿ ಕೀರ್ತನಾ ಎಚ್.ಎಸ್ ಹಾಗೂ ಬಸವ ಸೇವಾ ಪ್ರತಿಷ್ಠಾನದ ಗಂಗಾಬಿಕೆ ಅಕ್ಕ ಜಂಟಿಯಾಗಿ ಉದ್ಘಾಟಿಸಿದರು. ಬಸವರಾಜ ಮೂಲಗೆ, ಸಿದ್ರಾಮ ಶಿಂಧೆ, ಸತ್ಯಮೂರ್ತಿ, ರಾಣಿ ಸತ್ಯಮೂರ್ತಿ, ಅನಂತ ಚಿಂಚನಸೂರು, ಸದಾನಂದ ಪೆರ್ಲಾ, ಸಿದ್ರಾಮಪ್ಪ ಮಾಸಿಮಾಡೆ, ರಾಜೇಂದ್ರಕುಮಾರ ಗಂದಗೆ ಇದ್ದಾರೆ
ಬೀದರ್‌ನಲ್ಲಿ ರಾಜ್ಯ ಮಟ್ಟದ ಕಲಾ ಸಂಭ್ರಮೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಪ್ರೊಬೇಷನರಿ ಐಎಎಸ್ ಅಧಿಕಾರಿ ಕೀರ್ತನಾ ಎಚ್.ಎಸ್ ಹಾಗೂ ಬಸವ ಸೇವಾ ಪ್ರತಿಷ್ಠಾನದ ಗಂಗಾಬಿಕೆ ಅಕ್ಕ ಜಂಟಿಯಾಗಿ ಉದ್ಘಾಟಿಸಿದರು. ಬಸವರಾಜ ಮೂಲಗೆ, ಸಿದ್ರಾಮ ಶಿಂಧೆ, ಸತ್ಯಮೂರ್ತಿ, ರಾಣಿ ಸತ್ಯಮೂರ್ತಿ, ಅನಂತ ಚಿಂಚನಸೂರು, ಸದಾನಂದ ಪೆರ್ಲಾ, ಸಿದ್ರಾಮಪ್ಪ ಮಾಸಿಮಾಡೆ, ರಾಜೇಂದ್ರಕುಮಾರ ಗಂದಗೆ ಇದ್ದಾರೆ   

ಬೀದರ್: ‘ಕಲೆಯಲ್ಲಿ ಅದ್ಭುತ ಶಕ್ತಿ ಇದೆ. ಮಕ್ಕಳ ಬುದ್ಧಿಶಕ್ತಿ ಹಾಗೂ ಏಕಾಗ್ರತೆ ವೃದ್ಧಿಸಲು ಸಂಗೀತ ಹಾಗೂ ನೃತ್ಯ ನೆರವಾಗುತ್ತದೆ’ ಎಂದು ಪ್ರೊಬೇಷನರಿ ಐಎಎಸ್ ಅಧಿಕಾರಿ ಕೀರ್ತನಾ ಎಚ್.ಎಸ್ ಅಭಿಪ್ರಾಯಪಟ್ಟರು.

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ನಾಟ್ಯಶ್ರೀ ನೃತ್ಯಾಲಯ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಲಾ ಸಂಭ್ರಮೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ನಾಟ್ಯದಿಂದ ಮಕ್ಕಳಲ್ಲಿ ಧೈರ್ಯ, ಆತ್ಮವಿಶ್ವಾಸ ಹೆಚ್ಚುತ್ತದೆ. ಸಂಕೋಚ ಕಡಿಮೆಯಾಗುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೂ ಪೂರಕವಾಗಿದೆ’ ಎಂದು ಹೇಳಿದರು.

ADVERTISEMENT

‘ನಾಟ್ಯಶಾಸ್ತ್ರದ ಮೂಲ ಪದ ನಟ, ನಟ ಅಂದರೆ ನಾನು ಅಲ್ಲದೆ ಇರುವುದನ್ನು ಬಿಂಬಿಸುವುದು, ನಾಟ್ಯ ಒಂದು ದೊಡ್ಡ ಕಲೆಯಾಗಿದೆ. ಅಭಿವ್ಯಕ್ತಿಯ ಸಂಕೇತವಾಗಿದೆ’ ಎಂದು ತಿಳಿಸಿದರು.

ನಾಟ್ಯಶ್ರೀ ನೃತ್ಯಾಲಯ ನೀಡುವ 2020-21ನೇ ಸಾಲಿನ ನಾಟ್ಯಶ್ರೀ ಪ್ರಶಸ್ತಿಯನ್ನು ಕಲಬುರಗಿಯ ಭರತ ನಾಟ್ಯ ಕಲಾವಿದ ವರ್ಣ ಸಿಂಧು ನೃತ್ಯಕಲಾ ಕೇಂದ್ರದ ನಿರ್ದೇಶಕ ಅನಂತ ಕೆ, ಚಿಂಚನಸೂರ ಅವರಿಗೆ ಪ್ರದಾನ ಮಾಡಲಾಯಿತು.

ಬಸವ ಸೇವಾ ಪ್ರತಿಷ್ಠಾನದ ಗಂಗಾಬಿಕೆ ಅಕ್ಕ ಸಾನ್ನಿಧ್ಯ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಮಾಸಿಮಾಡೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ನಾಟ್ಯ ಶ್ರೀ ನೃತ್ಯಾಲಯದ ನಿರ್ದೇಶಕಿ ರಾಣಿ ಸತ್ಯಮೂರ್ತಿ ಇದ್ದರು.

ಆಯ್ಕೆ ಸಮಿತಿ ಸದಸ್ಯ ವೀರಶೆಟ್ಟಿ ಮೈಲೂರ್‌ಕರ್ ಪ್ರಶಸ್ತಿ ಹಾಗೂ ಪುರಸ್ಕೃತರ ಪರಿಚಯ ಮಾಡಿದರು. ಕೆ.ಸತ್ಯಮೂರ್ತಿ ಸ್ವಾಗತಿಸಿದರು. ನಾಟ್ಯಶ್ರೀ ನೃತ್ಯಾಲಯದ ಪುಟಾಣಿ ಕಲಾವಿದರು ಹಚ್ಚೇವು ಕನ್ನಡದ ದೀಪದ ಮೂಲಕ ಸ್ವಾಗತ ನೃತ್ಯಗೈದರು. ಬಸವರಾಜ ಮೂಲಗೆ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.