ADVERTISEMENT

ಬೀದರ್‌: ತೈಲ ಬೆಲೆ ವಿರೋಧಿಸಿ ಕಾಂಗ್ರೆಸ್‌ ಸೈಕಲ್‌ ಜಾಥಾ

​ಪ್ರಜಾವಾಣಿ ವಾರ್ತೆ
Published 7 ಜುಲೈ 2021, 7:41 IST
Last Updated 7 ಜುಲೈ 2021, 7:41 IST
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ   

ಬೀದರ್: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ.

ಜಿಲ್ಲಾ ಕೇಂದ್ರದಲ್ಲಿ ಪಕ್ಷದ ಚುನಾಯಿತ ಪ್ರತಿನಿಧಿಗಳು, ಮುಖಂಡರು, ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನೌಬಾದ್ ಬಸವೇಶ್ವರ ವೃತ್ತದಿಂದ ಸೈಕಲ್ ಜಾಥಾ ಆರಂಭಿಸಿದ್ದಾರೆ.

ಜಾಥಾ ಪ್ರತಾಪನಗರದ ಬಳಿ ಬಂದಿದ್ದು, ಶಿವನಗರ, ಮಡಿವಾಳ ವೃತ್ತ, ರೋಟರಿ ಕನ್ನಡಾಂಬೆ ವೃತ್ತ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ಬರಲಿದೆ.

ADVERTISEMENT

ಪಕ್ಷದ ಹಿರಿಯ ಮುಖಂಡ ಒಬೆದುಲ್ಲಾ ಷರೀಫ್, ಶರಣಪ್ರಕಾಶ ಪಾಟೀಲ, ಶಾಸಕ ರಹೀಂ ಖಾನ್, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಆನಂದ ದೇವಪ್ಪ, ಮಾಜಿ ಸಂಸದ ನರಸಿಂಹರಾವ್‌ ಸೂರ್ಯವಂಶಿ, ಕೆ.ಪುಂಡಲೀಕರಾವ್‌, ಬಸರೋದ್ದಿನ್‌ ಹಾಲಹಿಪ್ಪರಗಾ, ಶಂಕರರಾವ್ ದೊಡ್ಡಿ, ಮುರಳೀಧರ್‌ ಏಕಲಾರಕರ್, ಅಮೃತರಾವ್‌ ಚಿಮಕೋಡೆ, ಇರ್ಷಾದ್‌ ಪೈಲ್ವಾನ್, ಮಹಮ್ಮದ್‌ ನಿಸಾರ್‌, ಲತಾ ರಾಠೋಡ್‌, ಪರ್ವೇಜ್‌ ಕಮಲ, ಆನಂದ ದೇವಪ್ಪ, ಡಿ.ಕೆ.ಸಂಜುಕುಮಾರ, ಚಂದ್ರಕಾಂತ ಹಿಪ್ಪಳಗಾಂವ್‌, ಮಹಮ್ಮದ್‌ ಯುಸೂಫ್, ಫರೀದ್‌ ಖಾನ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.