ADVERTISEMENT

ಸಾಧ್ವಿ ಪ್ರಜ್ಞಾಸಿಂಗ್‌ ಹೇಳಿಕೆ ಆಕ್ರೋಶ: ಕಾಂಗ್ರೆಸ್‌ ಕಾರ್ಯಕರ್ಯರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಮೇ 2019, 14:53 IST
Last Updated 18 ಮೇ 2019, 14:53 IST
ಸಾಧ್ವಿ ಪ್ರಜ್ಞಾಸಿಂಗ್‌ ಹೇಳಿಕೆ ಖಂಡಿಸಿ ಬೀದರ್‌ನ ಅಂಬೇಡ್ಕರ್‌ ವೃತ್ತದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಸಾಧ್ವಿ ಪ್ರಜ್ಞಾಸಿಂಗ್‌ ಹೇಳಿಕೆ ಖಂಡಿಸಿ ಬೀದರ್‌ನ ಅಂಬೇಡ್ಕರ್‌ ವೃತ್ತದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಬೀದರ್: ನಾಥೂರಾಂ ಗೋಡ್ಸೆ ಒಬ್ಬ ಅಪ್ಪಟ ದೇಶಭಕ್ತ ಎಂದು ಹೇಳಿಕೆ ನೀಡಿದ ಬಿಜೆಪಿ ಭೂಪಾಲದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್‌ ಠಾಕೂರ್‌ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಾಧ್ವಿ ಪ್ರಜ್ಞಾಸಿಂಗ್‌ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ದೇಶದಲ್ಲಿ ಅಶಾಂತಿಯನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರನ್ನು ಕೀಳಾ ದೃಷ್ಟಿಯಿಂದ ನೋಡುವ ಮನೋಭಾವ ಹೊಂದಿದ್ದಾರೆ. ಇದರಿಂದ ಬಿಜೆಪಿಯ ಬಣ್ಣ ಬಯಲಾಗಿದೆ ಎಂದು ಟೀಕಿಸಿದರು.

ಕಳೆದು ಹೋದ ಘಟನೆಯನ್ನು ಕೆದಕಿ ಜನರ ಭಾವನೆಗಳಿಗೆ ಧಕ್ಕೆ ತರುವಂಥಹ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ವರಿಷ್ಠರು ಇಂತಹ ಮುಖಂಡರ ಮೇಲೆ ನಿಯಂತ್ರಣ ಸಾಧಿಸಿ ದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಡಿ.ಸಮಿ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ಹಿಪ್ಪಳಗಾಂವ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜಯ ಜಾಗೀರದಾರ್, ಕೆಪಿಸಿಸಿಯ ಕಾರ್ಯದರ್ಶಿ ರೋಹಿದಾಸ ಘೋಡೆ, ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಫರೀದ್ ಖಾನ್, ಕಾರ್ಯದರ್ಶಿ ಸುನೀಲ ಬಚ್ಚನ್, ಜಾರ್ಜ್ ಫರ್ನಾಂಡಿಸ್, ಅಕ್ಬರ್ ಪಾಶಾ, ಪಟೇಲ್, ನಿಖಿಲ, ರಾಜು ಚಿದ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.