ADVERTISEMENT

‘ಕೋವಿಡ್ ವಾರಿಯರ್ ಸೇವೆ ಮುಂದುವರಿಸಿ’

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2022, 15:57 IST
Last Updated 16 ಮಾರ್ಚ್ 2022, 15:57 IST
ಕೋವಿಡ್ ವಾರಿಯರ್‌ಗಳ ಸೇವೆ ಮುಂದುವರಿಕೆಗೆ ಒತ್ತಾಯಿಸಿ ಕರ್ನಾಟಕ ಸಂಯುಕ್ತ ಆರೋಗ್ಯ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಕೋವಿಡ್ ವಾರಿಯರ್‌ಗಳ ಸೇವೆ ಮುಂದುವರಿಕೆಗೆ ಒತ್ತಾಯಿಸಿ ಕರ್ನಾಟಕ ಸಂಯುಕ್ತ ಆರೋಗ್ಯ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್: ಕೋವಿಡ್ ವಾರಿಯರ್‌ಗಳ ಸೇವೆ ಮುಂದುವರಿಸಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕು ಎಂದು ಕರ್ನಾಟಕ ಸಂಯುಕ್ತ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕ ಆಗ್ರಹಿಸಿದೆ.

ಸಂಘದ ಪದಾಧಿಕಾರಿಗಳು ನಗರದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ ಅವರನ್ನು ಭೇಟಿ ಮಾಡಿ ಈ ಕುರಿತು ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ, ಉಪಾಧ್ಯಕ್ಷ ವಿನ್ಸೆಂಟ್, ಕಾರ್ಯದರ್ಶಿ ರಾಜಶೇಖರ, ಖಜಾಂಟಿ ರವಿ ವರ್ಮಾ, ಆನಂದ, ಜಾರ್ಜ್, ಮಂಜುನಾಥ, ವಿದ್ಯಾವತಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.