ಬೀದರ್: ಜಿಲ್ಲೆಯಲ್ಲಿ ಶನಿವಾರ ಆರಂಭವಾಗಿರುವ ಜಿಟಿ ಜಿಟಿ ಮಳೆ ಭಾನುವಾರವೂ ಮುಂದುವರಿಯಿತು.
ದಟ್ಟವಾದ ಮೋಡ ಕವಿದು ಸುರಿಯತ್ತಲೇ ಇದ್ದ ಕಾರಣ ಜನ ಮನೆಗಳಿಂದ ಹೊರಗೆ ಬರಲಿಲ್ಲ. ಮಾರುಕಟ್ಟೆ ಪ್ರದೇಶದಲ್ಲಿ ಜನರೇ ಇರಲಿಲ್ಲ.
ಬೀದರ್ ನಗರದಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಬಸವಕಲ್ಯಾಣ, ಔರಾದ್, ಕಮಲನಗರ, ಭಾಲ್ಕಿ, ಹುಮನಾಬಾದ್ ಹಾತೂ ಚಿಟಗುಪ್ಪ ತಾಲ್ಲೂಕಿನಲ್ಲಿ ಜಿಟಿ ಜಿಟಿ ಮಳೆಯಾಗಿದೆ. ಮಳೆಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಹವಾಮಾನ ಇಲಾಖೆಯ ಮನ್ಸೂಚನೆ ಪ್ರಕಾರ ಇನ್ನೂ ನಾಲ್ಕು ದಿನ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಮುಂದವರಿಯಲಿದೆ. ಮೋಡ ಕವಿದ ವಾತಾವರಣದಿಂದಾಗಿ ರೈತರಲ್ಲಿ ಆತಂಕ ಮನೆ ಮಾಡಿದೆ. ಇದೇ ವಾತಾವರಣ ಮುಂದುವರಿದರೆ ಬೆಳೆಗಳಿಗೆ ಕೀಟಬಾಧೆ ಕಾಣಿಸಿಕೊಳ್ಳುವ ಸಾಧ್ಯತೆ ಇರುವ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.