ADVERTISEMENT

ಜಿಲ್ಲೆಯಲ್ಲಿ ಮುಂದುವರಿದ ಜಿಟಿ ಮಳೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2020, 8:16 IST
Last Updated 16 ಆಗಸ್ಟ್ 2020, 8:16 IST
ಬೀದರ್‌ನಲ್ಲಿ ಭಾನುವಾರ ಸುರಿಯುವ ಮಳೆಯಲ್ಲಿಯೇ ಸಾಗಿದ ಬೈಕ್ ಸವಾರ
ಬೀದರ್‌ನಲ್ಲಿ ಭಾನುವಾರ ಸುರಿಯುವ ಮಳೆಯಲ್ಲಿಯೇ ಸಾಗಿದ ಬೈಕ್ ಸವಾರ   

ಬೀದರ್‌: ಜಿಲ್ಲೆಯಲ್ಲಿ ಶನಿವಾರ ಆರಂಭವಾಗಿರುವ ಜಿಟಿ ಜಿಟಿ ಮಳೆ ಭಾನುವಾರವೂ ಮುಂದುವರಿಯಿತು.
ದಟ್ಟವಾದ ಮೋಡ ಕವಿದು ಸುರಿಯತ್ತಲೇ ಇದ್ದ ಕಾರಣ ಜನ ಮನೆಗಳಿಂದ ಹೊರಗೆ ಬರಲಿಲ್ಲ. ಮಾರುಕಟ್ಟೆ ಪ್ರದೇಶದಲ್ಲಿ ಜನರೇ ಇರಲಿಲ್ಲ.

ಬೀದರ್‌ ನಗರದಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಬಸವಕಲ್ಯಾಣ, ಔರಾದ್, ಕಮಲನಗರ, ಭಾಲ್ಕಿ, ಹುಮನಾಬಾದ್ ಹಾತೂ ಚಿಟಗುಪ್ಪ ತಾಲ್ಲೂಕಿನಲ್ಲಿ ಜಿಟಿ ಜಿಟಿ ಮಳೆಯಾಗಿದೆ. ಮಳೆಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಹವಾಮಾನ ಇಲಾಖೆಯ ಮನ್ಸೂಚನೆ ಪ್ರಕಾರ ಇನ್ನೂ ನಾಲ್ಕು ದಿನ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಮುಂದವರಿಯಲಿದೆ. ಮೋಡ ಕವಿದ ವಾತಾವರಣದಿಂದಾಗಿ ರೈತರಲ್ಲಿ ಆತಂಕ ಮನೆ ಮಾಡಿದೆ. ಇದೇ ವಾತಾವರಣ ಮುಂದುವರಿದರೆ ಬೆಳೆಗಳಿಗೆ ಕೀಟಬಾಧೆ ಕಾಣಿಸಿಕೊಳ್ಳುವ ಸಾಧ್ಯತೆ ಇರುವ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.