ADVERTISEMENT

ಕೋವಿಡ್ ಎರಡನೇ ಅಲೆ: ಗಡಿಯಲ್ಲಿ ಕಟ್ಟೆಚ್ಚರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಠಿಕಾಣಿ ಹೂಡಿದ ವೈದ್ಯರು

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 3:06 IST
Last Updated 23 ಫೆಬ್ರುವರಿ 2021, 3:06 IST
ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮಹಾರಾಷ್ಟ್ರದಿಂದ ಬಂದಿದ್ದ ಬಸ್‌ ಚಾಲಕ ಹಾಗೂ ನಿರ್ವಾಹಕರ ರ್‍ಯಾಪಿಡ್ ಟೆಸ್ಟ್‌ಗಾಗಿ ಮಾದರಿ ಸಂಗ್ರಹಿಸಲಾಯಿತು
ಬಸವಕಲ್ಯಾಣ ತಾಲ್ಲೂಕಿನ ಚಂಡಕಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮಹಾರಾಷ್ಟ್ರದಿಂದ ಬಂದಿದ್ದ ಬಸ್‌ ಚಾಲಕ ಹಾಗೂ ನಿರ್ವಾಹಕರ ರ್‍ಯಾಪಿಡ್ ಟೆಸ್ಟ್‌ಗಾಗಿ ಮಾದರಿ ಸಂಗ್ರಹಿಸಲಾಯಿತು   

ಬಸವಕಲ್ಯಾಣ: ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ಇಡಲಾಗುತ್ತಿದ್ದು, ಸಮೀಪದ ಚಂಡಕಾಪುರ ಬಳಿಯ ರಾಜ್ಯದ ಗಡಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ.

ಅಲ್ಲದೇ, ಹುಲಸೂರ ಸಮೀಪದ ಶಹಾಜಹಾನಿ ಔರಾದ್ ಗಡಿಯಲ್ಲಿಯೂ ಎರಡು ದಿನಗಳಿಂದ ತಪಾಸಣಾ ಕಾರ್ಯ ನಡೆದಿದೆ. ಎರಡೂ ಸ್ಥಳಗಳಲ್ಲಿ ಒಟ್ಟು 470ಕ್ಕೂ ಅಧಿಕ ಜನರ ತಪಾಸಣೆ ಕೈಗೊಳ್ಳಲಾಗಿದೆ. ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಬರುವವರ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಪರಿಶೀಲಿಸಲಾಗುತ್ತಿದೆ.

`ಸಂಶಯಾಸ್ಪದ ವ್ಯಕ್ತಿಗಳ ಜ್ವರ ಪರೀಕ್ಷೆ ಹಾಗೂ ಕೋವಿಡ್‌ ಪರೀಕ್ಷೆ ಕೂಡ ನಡೆಸಲಾಗುತ್ತಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಬಸ್‌ಗಳ ಚಾಲಕ ಮತ್ತು ನಿರ್ವಾಹಕರ ರ್‍ಯಾಪಿಡ್ ಆ್ಯಂಟಿಜನ್‌ ಟೆಸ್ಟ್ ನಡೆಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರವೀಣ ಹೂಗಾರ ತಿಳಿಸಿದ್ದಾರೆ.

ADVERTISEMENT

ಬ್ಯಾರಿಕೇಡ್‌ಗಳನ್ನು ಅಳವಡಿಸಿ ತಪಾಸಣಾ ಕಾರ್ಯ ನಡೆಯುತ್ತಿರುವ ಕಾರಣ ಹೆದ್ದಾರಿಯ ಆಚೆ ಈಚೆ ವಾಹನಗಳು ನಿಲ್ಲುತ್ತಿದ್ದು ಸುಗಮ ವಾಹನ ಸಂಚಾರಕ್ಕೆ ಅಡೆತಡೆ ಆಗುತ್ತಿದೆ. ಮಂಠಾಳ ಠಾಣೆ ಸಬ್ ಇನ್‌ಸ್ಪೆಕ್ಟರ್ ಜಯಶ್ರೀ ನೇತೃತ್ವದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲಾಗುತ್ತಿದೆ.

ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಪರಿಶೀಲನೆ

ಬಸವಕಲ್ಯಾಣ: ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ಇಡಲಾಗುತ್ತಿದ್ದು, ಸಮೀಪದ ಚಂಡಕಾಪುರ ಬಳಿಯ ರಾಜ್ಯದ ಗಡಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ.

ಅಲ್ಲದೇ, ಹುಲಸೂರ ಸಮೀಪದ ಶಹಾಜಹಾನಿ ಔರಾದ್ ಗಡಿಯಲ್ಲಿಯೂ ಎರಡು ದಿನಗಳಿಂದ ತಪಾಸಣಾ ಕಾರ್ಯ ನಡೆದಿದೆ. ಎರಡೂ ಸ್ಥಳಗಳಲ್ಲಿ ಒಟ್ಟು 470ಕ್ಕೂ ಅಧಿಕ ಜನರ ತಪಾಸಣೆ ಕೈಗೊಳ್ಳಲಾಗಿದೆ. ಮದುವೆ ಹಾಗೂ ಇತರೆ ಕಾರ್ಯಕ್ರಮಗಳಿಗೆ ಬರುವವರ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಪರಿಶೀಲಿಸಲಾಗುತ್ತಿದೆ.

`ಸಂಶಯಾಸ್ಪದ ವ್ಯಕ್ತಿಗಳ ಜ್ವರ ಪರೀಕ್ಷೆ ಹಾಗೂ ಕೋವಿಡ್‌ ಪರೀಕ್ಷೆ ಕೂಡ ನಡೆಸಲಾಗುತ್ತಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಬಸ್‌ಗಳ ಚಾಲಕ ಮತ್ತು ನಿರ್ವಾಹಕರ ರ್‍ಯಾಪಿಡ್ ಆ್ಯಂಟಿಜನ್‌ ಟೆಸ್ಟ್ ನಡೆಸ ಲಾಗಿದ್ದು, ನೆಗೆಟಿವ್ ವರದಿ ಬಂದಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರವೀಣ ಹೂಗಾರ ತಿಳಿಸಿದ್ದಾರೆ.

ಬ್ಯಾರಿಕೇಡ್‌ಗಳನ್ನು ಅಳವಡಿಸಿ ತಪಾಸಣಾ ಕಾರ್ಯ ನಡೆಯುತ್ತಿರುವ ಕಾರಣ ಹೆದ್ದಾರಿಯ ಆಚೆ ಈಚೆ ವಾಹನಗಳು ನಿಲ್ಲುತ್ತಿದ್ದು ಸುಗಮ ವಾಹನ ಸಂಚಾರಕ್ಕೆ ಅಡೆತಡೆ ಆಗುತ್ತಿದೆ. ಮಂಠಾಳ ಠಾಣೆ ಸಬ್ ಇನ್‌ಸ್ಪೆಕ್ಟರ್ ಜಯಶ್ರೀ ನೇತೃತ್ವದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.