ಬೀದರ್: ಜಿಲ್ಲಾ ಆಡಳಿತ ಹಮ್ಮಿಕೊಂಡಿದ್ದ ಕೋವಿಡ್ ವಿಶೇಷ ಲಸಿಕಾ ಮೇಳದ ಅಂಗವಾಗಿ ನಗರದ ವಾರ್ಡ್ ಸಂಖ್ಯೆ 18 ರ ವ್ಯಾಪ್ತಿಯ ಸಾಯಿ ಕಾಲೊನಿಯಲ್ಲಿ ಶುಕ್ರವಾರ ಕೋವಿಡ್ ಲಸಿಕಾಕರಣ ನಡೆಯಿತು.
ಮೀನಾಕ್ಷಿ ಎಸ್. ಮುದಾಳೆ ಅವರು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೊನಿಯ ಅನೇಕರು ಕೋವಿಡ್ ಲಸಿಕೆಯ ಮೊದಲ ಹಾಗೂ ಎರಡನೇ ಡೋಸ್ ಪಡೆದುಕೊಂಡರು.
ಕೋವಿಡ್ ಸೋಂಕು ತಡೆಗಾಗಿ ಮುಖ್ಯಮಂತ್ರಿ ಅವರ ಸೂಚನೆ ಮೇರೆಗೆ ಜಿಲ್ಲಾ ಆಡಳಿತ ಹಮ್ಮಿಕೊಂಡ ವಿಶೇಷ ಲಸಿಕಾ ಮೇಳದ ಬಗ್ಗೆ ಕಾಲೊನಿಯಲ್ಲಿ ಜನಜಾಗೃತಿ ಮೂಡಿಸಲಾಗಿತ್ತು. ಲಸಿಕಾಕರಣಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿರುವುದು ಸಂತಸ ತಂದಿದೆ ಎಂದು ಬಿಜೆಪಿ ಯುವ ಮುಖಂಡ ವಿಕ್ರಮ ಮುದಾಳೆ ನುಡಿದರು.
ನಗರಸಭೆ ಸದಸ್ಯೆ ಉಲ್ಲಾಸಿನಿ ವಿಕ್ರಮ ಮುದಾಳೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.