ADVERTISEMENT

ಕ್ರಿಕೆಟ್‌: ಹುಬ್ಬಳ್ಳಿ ತಂಡದ ಮಡಲಿಗೆ ಟ್ರೋಫಿ

​ಪ್ರಜಾವಾಣಿ ವಾರ್ತೆ
Published 4 ಮೇ 2022, 3:14 IST
Last Updated 4 ಮೇ 2022, 3:14 IST
ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉತ್ತರ ಕರ್ನಾಟಕ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆದ ಹುಬ್ಬಳ್ಳಿ ವಿಭಾಗ ತಂಡಕ್ಕೆ ಟ್ರೋಫಿ ಪ್ರದಾನ ಮಾಡಲಾಯಿತು
ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉತ್ತರ ಕರ್ನಾಟಕ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆದ ಹುಬ್ಬಳ್ಳಿ ವಿಭಾಗ ತಂಡಕ್ಕೆ ಟ್ರೋಫಿ ಪ್ರದಾನ ಮಾಡಲಾಯಿತು   

ಜನವಾಡ: ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉತ್ತರ ಕರ್ನಾಟಕ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಹುಬ್ಬಳ್ಳಿ ವಿಭಾಗ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು.

ಫೈನಲ್ ಪಂದ್ಯದಲ್ಲಿ ಹುಬ್ಬಳ್ಳಿ ವಿಭಾಗ ತಂಡವು ಬೆಳಗಾವಿ ವಿಭಾಗ ತಂಡವನ್ನು 8 ರನ್‍ಗಳಿಂದ ಮಣಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ವಿಭಾಗ ತಂಡ ನಿಗದಿತ 12 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 85 ರನ್ ಪೇರಿಸಿತು. ನಂತರ ಬ್ಯಾಟಿಂಗ್‍ಗೆ ಇಳಿದ ಬೆಳಗಾವಿ ವಿಭಾಗ ತಂಡ 7 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿ ಸೋಲು ಅನುಭವಿಸಿತು.

ADVERTISEMENT

ಟೂರ್ನಿಯಲ್ಲಿ ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ಹೊಸಪೇಟೆ ಹಾಗೂ ರಾಯಚೂರು ವಿಭಾಗಗಳ ತಂಡಗಳು ಪಾಲ್ಗೊಂಡಿದ್ದವು.

ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಕ್ಕೆ ಟ್ರೋಫಿ ಪ್ರದಾನ ಮಾಡಲಾಯಿತು.
ಬೀದರ್‌ನ ಕಚ್ ಕಾಡವಾ ಪಟಿದಾರ್ ಸಂಸ್ಥಾನ ಸಮಾಜ ಯುವಕ ಮಂಡಲ (ಗುಜರಾತಿ ಸಮಾಜ) ಟೂರ್ನಿ ಆಯೋಜಿಸಿತ್ತು. ಮಂಡಲ ಅಧ್ಯಕ್ಷ ನಿಲೇಶ್ ಪಟೇಲ್, ಕಾರ್ಯದರ್ಶಿ ನರೇಶ್ ಪಟೇಲ್, ಟೂರ್ನಿಯ ರೂವಾರಿ ಗಳಾದ ಜಯೇಶ್ ಪಟೇಲ್, ಭಾವೇಶ್ ಪಟೇಲ್, ಹರೀಶ್ ಪಟೇಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.