ADVERTISEMENT

ನದಿಯಲ್ಲಿ ಶವ ಪತ್ತೆ: ಕೊಲೆ ಶಂಕೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 16:10 IST
Last Updated 11 ಏಪ್ರಿಲ್ 2022, 16:10 IST

ಔರಾದ್: ತಾಲ್ಲೂಕಿನ ಕಂದಗೂಳದ ಬಳಿ ಮಾಂಜ್ರಾ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ.

‘30-35ರ ಆಸುಪಾಸು ವಯಸ್ಸಿನ ವ್ಯಕ್ತಿಯ ಶವವನ್ನು ಗೋಣಿ ಚೀಲದಲ್ಲಿ ಹಾಕಿ ನದಿಗೆ ಎಸೆಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಡಗಾಪುರ: ನದಿಗೆ ಹಾರಿ ರೈತ ಆತ್ಮಹತ್ಯೆ

ADVERTISEMENT

ಔರಾದ್: ತಾಲ್ಲೂಕಿನ ಹೆಡಗಾಪುರ ಗ್ರಾಮದ ರೈತ ಕಾಶಿನಾಥ ಪಾಟೀಲ (65) ನಿಟ್ಟೂರ ಬಳಿ ಮಾಂಜ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರಿಗೆ 15 ಎಕರೆ ಜಮೀನಿದೆ.

ವಿವಿಧ ಬ್ಯಾಂಕ್‌ಗಳಿಂದ ಸಾಲ ಮಾಡಿದ್ದರು. ಅದನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಸಂಬಂಧಿಕರು ದೂರು ನೀಡಿದ್ದಾರೆ. ಈ ಸಂಬಂಧ ಠಾಣಾಕುಶನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.