ಬಸವಕಲ್ಯಾಣ: ಇಲ್ಲಿನ ಲಾಡ್ಜ್ವೊಂದರ ಮೇಲೆ ಪಟ್ಟಣ ಠಾಣೆ ಪೊಲೀಸರು ಶನಿವಾರ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.
ಲಾಡ್ಜ್ ಮಾಲೀಕನ ಪುತ್ರ ಶ್ರೀನಿವಾಸ ತ್ರಿಮುಖೆ, ರಮೇಶ ಮಹಾಗಾಂವ ಹಾಗೂ ಅರುಣಕುಮಾರ ಬಂಧಿತರು. ಪಶ್ಚಿಮಬಂಗಾಳ, ತೆಲಂಗಾಣ, ಹಾಗೂ ಕಲಬುರ್ಗಿಯ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.