ADVERTISEMENT

ಬೆಳೆ ಹಾನಿ: ಶೀಘ್ರ ಪರಿಹಾರಕ್ಕೆ ವಿಜಯಸಿಂಗ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2020, 15:11 IST
Last Updated 16 ಅಕ್ಟೋಬರ್ 2020, 15:11 IST
ವಿಜಯಸಿಂಗ್‌
ವಿಜಯಸಿಂಗ್‌   

ಬೀದರ್: ಭಾರಿ ಮಳೆ ಕಾರಣ ಜಿಲ್ಲೆಯಲ್ಲಿ ಬೆಳೆ ಹಾನಿಗೀಡಾದ ರೈತರು ಹಾಗೂ ಮನೆ ಕಳೆದುಕೊಂಡವರಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಆಗ್ರಹಿಸಿದ್ದಾರೆ.

ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ನದಿ, ಕೆರೆ ಕಟ್ಟೆ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ ಎಂದು ತಿಳಿಸಿದ್ದಾರೆ.

ADVERTISEMENT

ಹಲವು ಗ್ರಾಮಗಳು ನೀರಿನಲ್ಲಿ ಮುಳುಗಡೆಯಾಗಿವೆ. ಬೆಳೆ ಹಾನಿಯಾಗಿದೆ. ಮನೆಗಳು ಕುಸಿದಿವೆ. ಸಣ್ಣಪುಟ್ಟ ಸೇತುವೆ ಹಾಗೂ ರಸ್ತೆಗಳು ಕಿತ್ತುಕೊಂಡು ಹೋಗಿವೆ. ಜನರೊಂದಿಗೆ ಜಾನುವಾರುಗಳೂ ತೊಂದರೆಯಲ್ಲಿವೆ ಎಂದು ಹೇಳಿದ್ದಾರೆ.

ತೊಂದರೆಗೆ ಸಿಲುಕಿರುವ ಜನ ಹಾಗೂ ಜಾನುವಾರುಗಳನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಕಾಳಜಿ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.