ADVERTISEMENT

ಪತ್ತೆಯಾಗದ ಯುವಕ: ಡಿಸಿ, ಎಸ್ಪಿ ಸ್ಥಳಕ್ಕೆ ಭೇಟಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2023, 16:25 IST
Last Updated 26 ಜುಲೈ 2023, 16:25 IST
ಬಸವಕಲ್ಯಾಣ ತಾಲ್ಲೂಕಿನ ದನ್ನೂರ (ಆರ್) ಗ್ರಾಮದ ಹಳ್ಳದಲ್ಲಿ ಮಳೆ ನೀರಿನಲ್ಲಿ ಕೊಚ್ಚಿಹೋದ ಯುವಕ ಎರಡನೇ ದಿನವೂ ಪತ್ತೆ ಆಗದ ಕಾರಣ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಸ್ಥಳಕ್ಕೆ ಭೇಟಿ ನೀಡಿದರು
ಬಸವಕಲ್ಯಾಣ ತಾಲ್ಲೂಕಿನ ದನ್ನೂರ (ಆರ್) ಗ್ರಾಮದ ಹಳ್ಳದಲ್ಲಿ ಮಳೆ ನೀರಿನಲ್ಲಿ ಕೊಚ್ಚಿಹೋದ ಯುವಕ ಎರಡನೇ ದಿನವೂ ಪತ್ತೆ ಆಗದ ಕಾರಣ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಸ್ಥಳಕ್ಕೆ ಭೇಟಿ ನೀಡಿದರು   

ಬಸವಕಲ್ಯಾಣ: ತಾಲ್ಲೂಕಿನ ಧನ್ನೂರ (ಆರ್) ಗ್ರಾಮದ ಹಳ್ಳದಲ್ಲಿ ಮಳೆ ನೀರಿನೊಂದಿಗೆ ಮಂಗಳವಾರ ಕೊಚ್ಚಿ ಹೋಗಿದ್ದ ಯುವಕ ಮಲ್ಲಪ್ಪ (26) ಎರಡನೇ ದಿನವೂ ಪತ್ತೆ ಆಗಲಿಲ್ಲ.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಗ್ನಿ ಶಾಮಕ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ ಪ್ರವೀಣ ನೇತೃತ್ವದಲ್ಲಿ ಎರಡನೇ ದಿನವೂ ಶೋಧ ಕಾರ್ಯ ನಡೆಯಿತು. ಡ್ರೋಣ್‌ ಮೂಲಕವೂ ಇಡೀ ಹಳ್ಳದಲ್ಲಿ ಶೋಧಿಸಲಾಯಿತು. ಆದರೂ, ಯುವಕ ಎಲ್ಲಿಯೂ ಸಿಗಲಿಲ್ಲ ಎನ್ನಲಾಗಿದೆ.

ತಹಶೀಲ್ದಾರ್ ಶಾಂತಗೌಡ ಬಿರಾದಾರ ಮತ್ತಿತರೆ ಅಧಿಕಾರಿಗಳು ಸಹ ಸ್ಥಳದಲ್ಲಿದ್ದು ಶೋಧ ಕಾರ್ಯ ಚುರುಕುಗೊಳಿಸಿದರು. ಎರಡನೇ ದಿನವೂ ಯುವಕ ಪತ್ತೆಯಾಗದ ಕಾರಣ ಪಾಲಕರ ಮತ್ತು ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.