ಬೀದರ್: ಜಿಲ್ಲಾ ಚುನಾವಣಾಧಿಕಾರಿ ಎಚ್.ಆರ್. ಮಹಾದೇವ ಸೋಮವಾರ ಬಿವಿಬಿ ಕಾಲೇಜಿನಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸಿದ್ಧತೆಯನ್ನು ಪರಿಶೀಲಿಸಿದರು.
ಬೀದರ್ ಲೋಕಸಭಾ ಮತಕ್ಷೇತ್ರದ ಒಟ್ಟು ಎಂಟು ವಿಧಾನಸಭಾ ಮತ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ವೀಕ್ಷಣೆ ಮಾಡಿದರು.
ಮತ ಎಣಿಕೆ ಕೇಂದ್ರದಲ್ಲಿನ ವಿವಿಪ್ಯಾಟ್ ಕೌಂಟಿಂಗ್ ಚೇಂಬರ್, ಜನರಲ್ ಕೌಂಟಿಂಗ್ ಚೇಂಬರ್ ಹಾಗೂ ಮಾಧ್ಯಮ ಕೇಂದ್ರದ ಸಿದ್ಧತೆಯನ್ನು ವೀಕ್ಷಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬೀದರ್ ಉಪ ವಿಭಾಗಾಧಕಾರಿ ಶಂಕರ ವಾಣಕ್ಯಾಳ, ಬಸವಕಲ್ಯಾಣ ಉಪ ವಿಭಾಗಾಧಕಾರಿ ಗ್ಯಾನೇಂದ್ರಕುಮಾರ ಗಂಗವಾರ, ತಹಶೀಲ್ದಾರ್ ಚಂದ್ರಶೇಖರ ಸಿ., ಅಣ್ಣಾರಾವ್ ಪಾಟೀಲ, ನಾಗಯ್ಯ ಸ್ವಾಮಿ,
ಸಾವಿತ್ರಿ ಸಲಗರ, ಸುಬ್ಬಣ್ಣ ಜಮಖಂಡಿ, ಚುನಾವಣಾ ತಹಶೀಲ್ದಾರ್ ಅಂಜುಂ ತಬಸುಮ್ ಇದ್ದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.