ADVERTISEMENT

ಕರ್ನಾಟಕ ಕಾಲೇಜಿಗೆ ಡಿಡಿಪಿಯು ದಿಢೀರ್ ಭೇಟಿ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 14:11 IST
Last Updated 1 ಜನವರಿ 2021, 14:11 IST
ತರಗತಿಗಳು ಪ್ರಾರಂಭವಾದ ಪ್ರಯುಕ್ತ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಶುಕ್ರವಾರ ಬೀದರ್‌ನ ಕರ್ನಾಟಕ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು
ತರಗತಿಗಳು ಪ್ರಾರಂಭವಾದ ಪ್ರಯುಕ್ತ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಶುಕ್ರವಾರ ಬೀದರ್‌ನ ಕರ್ನಾಟಕ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು   

ಬೀದರ್: ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಶುಕ್ರವಾರ ಇಲ್ಲಿಯ ಕರ್ನಾಟಕ ಪದವಿಪೂರ್ವ ಕಾಲೇಜಿಗೆ ದಿಢೀರ್ ಭೇಟಿ ನೀಡಿದರು.

ಕೋವಿಡ್ ಕಾರಣ ಮಾಸ್ಕ್, ಸ್ಯಾನಿಟೈಸರ್, ಸುರಕ್ಷಿತ ಅಂತರ, ಜಾಗೃತಿ ಫಲಕ ಸೇರಿದಂತೆ ಕಾಲೇಜಿನಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.

ವಿದ್ಯಾರ್ಥಿಗಳ ವತಿಯಿಂದ ಆಯೋಜಿಸಿದ್ದ ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.
ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರ ಹಾಗೂ ಉಪನ್ಯಾಸಕರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.