ಕಮಲನಗರ: ಹಾವು ಕಚ್ಚಿದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕಮಲನಗರ ತಾಲ್ಲೂಕಿನ ಡಿಗ್ಗಿ ಗ್ರಾಮದಲ್ಲಿ ಜರುಗಿದೆ.
ಧನರಾಜ ಸೂರ್ಯಕಾಂತ ಶೇಟಕಾರ(31) ಮೃತಪಟ್ಟ ವ್ಯಕ್ತಿ. ಈತ ಬೀದರ್ನಲ್ಲಿ ವಾಚ್ಮ್ಯಾನ್ ಕೆಲಸ ಮಾಡುತ್ತಿದ್ದನು.
ಬೀದರ್ನ ಖಾಸಗಿ ಮನೆ ಯೊಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ಮಲಗಿದ್ದ ಸಮಯದಲ್ಲಿ ಹಾವು ಕಚ್ಚಿದೆ ಎಂದು ಕುಟುಂಬ ಮೂಲದಿಂದ ತಿಳಿದು ಬಂದಿದೆ.
ಶುಕ್ರವಾರ ಸ್ವಗ್ರಾಮ ಡಿಗ್ಗಿಯ ಸಾರ್ವಜನಿಕ ರುದ್ರಭೂಮಿಯಲ್ಲಿ ಸಂಜೆ ಅಂತ್ಯ ಸಂಸ್ಕಾರ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.