ADVERTISEMENT

ಸಾಲದ ಹೊರೆ; ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಔರಾದ್ ರೈತ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2024, 6:44 IST
Last Updated 30 ಮಾರ್ಚ್ 2024, 6:44 IST
<div class="paragraphs"><p>ಉಮೇಶ ಹುಲ್ಲೆಪ್ಪ</p></div>

ಉಮೇಶ ಹುಲ್ಲೆಪ್ಪ

   

ಔರಾದ್: ತಾಲ್ಲೂಕಿನ ಮುಸ್ತಾಪುರ ಗ್ರಾಮದ ರೈತ ಉಮೇಶ ಹುಲ್ಲೆಪ್ಪ (45) ಶನಿವಾರ ಬೆಳಿಗ್ಗೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಹಾಯದಿಂದ ಮೃತದೇಹ ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸಿದರು.

ADVERTISEMENT

ಮೃತ ರೈತನಿಗೆ ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗ ಇದ್ದಾನೆ. ಲಾಧಾ ಪಿಕೆಪಿಎಸ್‌ನಿಂದ ₹1 ಲಕ್ಷ ಹಾಗೂ ಖಾಸಗಿ ಬ್ಯಾಂಕನಿಂದ ₹2 ಲಕ್ಷ ಸಾಲ ಮಾಡಿದ್ದರು. ಸಾಲದ ಹೊರೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಮೃತರ ಹೆಂಡತಿ ಜಗದೇವಿ ನೀಡಿದ ದೂರಿನ ಮೇರೆಗೆ ಸಂತಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.