ADVERTISEMENT

ಸಹಕಾರ ಆಂದೋಲನದಿಂದ ಪ್ರತಿ ಕುಟುಂಬದ ಅಭಿವೃದ್ಧಿ

ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ್ ಅಭಿಮತ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 15:10 IST
Last Updated 5 ಆಗಸ್ಟ್ 2021, 15:10 IST
ಬೀದರ್‌ನ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರಿಗೆ ಆಯೋಜಿಸಿರುವ ಆಡಳಿತ ನಿರ್ವಹಣೆ ತರಬೇತಿ ಕಾರ್ಯಕ್ರಮವನ್ನು ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ್ ಉದ್ಘಾಟಿಸಿದರು
ಬೀದರ್‌ನ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರಿಗೆ ಆಯೋಜಿಸಿರುವ ಆಡಳಿತ ನಿರ್ವಹಣೆ ತರಬೇತಿ ಕಾರ್ಯಕ್ರಮವನ್ನು ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ್ ಉದ್ಘಾಟಿಸಿದರು   

ಬೀದರ್: ಸಹಕಾರ ಆಂದೋಲನದಿಂದ ಪ್ರತಿ ಕುಟುಂಬದ ಅಭಿವೃದ್ಧಿ ಸಾಧ್ಯವಿದೆ ಎಂದು ಜಿಲ್ಲಾ ಸಹಕಾರ ಕೇಂದ್ರ(ಡಿಸಿಸಿ) ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಮಹಾಜನ್ ಅಭಿಪ್ರಾಯಪಟ್ಟರು.

ನಬಾರ್ಡ್ ವತಿಯಿಂದ ನಗರದ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರಿಗೆ ಆಯೋಜಿಸಿರುವ ಆಡಳಿತ ನಿರ್ವಹಣೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ಕ್ಷೇತ್ರವು ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ರೈತರಿಗೆ ಆರ್ಥಿಕ ಸೇವೆಗಳನ್ನು ಒದಗಿಸುತ್ತಿದೆ. ನಾಯಕತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.

ADVERTISEMENT

ಸಹಕಾರ ಸಂಘಗಳು ಹಳ್ಳಿಗಳಲ್ಲಿನ ಸಾಮಾಜಿಕ ಅಸಮಾನತೆ ಹೋಗಲಾಡಿಸಿ, ಸಮಾನತೆ ತರಲು ಶ್ರಮಿಸುತ್ತಿವೆ. ಜನರಲ್ಲಿ ಭ್ರಾತೃತ್ವ, ಪರಸ್ಪರ ಸಹಕಾರ, ಸೇವಾ ಮನೋಭಾವ ಬೆಳೆಸುತ್ತಿವೆ ಎಂದು ತಿಳಿಸಿದರು.

ಸಮಾಜದ ನಡುವೆ ಬೆಸುಗೆ ಹಾಕುವ ಸಾಮರ್ಥ್ಯ ಸಹಕಾರಿಗಳಿಗೆ ಇದೆ ಎಂದು ನುಡಿದರು.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆ ಸಹಕಾರ ಸಂಘದ ಅಧ್ಯಕ್ಷೆ ಜಯಮ್ಮ ಮಾತನಾಡಿ, ಸಹಕಾರ ಆಂದೋಲನದ ವಿಶೇಷ ಸಾಮಥ್ರ್ಯಗಳನ್ನು ಪರಿಗಣಿಸಿ, ಸಮಾಜದ ಬಗ್ಗೆ ಕಾಳಜಿ ಹೊಂದಿರುವ ಜನರು ಶಿಸ್ತು ಹಾಗೂ ಪ್ರಾಮಾಣಿಕತೆಯಿಂದ ಸಹಕಾರ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳಬೇಕು. ಜನಪರ ಕಾರ್ಯ ಕೈಗೊಳ್ಳಬೇಕು. ಜನರ ಅಭಿವೃದ್ಧಿಗೆ ನೆರವಾಗಬೇಕು ಎಂದು ಹೇಳಿದರು.

ಚಳ್ಳಕೆರೆ ತಾಲ್ಲೂಕಿನ ಸಹಕಾರ ಸಂಘದ ಅಧ್ಯಕ್ಷ ನಾರಾಯಣ ರೆಡ್ಡಿ ಮಾತನಾಡಿ, ಸಹಕಾರ ಸಂಘಗಳ ಆಡಳಿತ ಮಂಡಳಿಗಳ ಸದಸ್ಯರು, ಉತ್ತಮ ಆಡಳಿತ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ಮಾಡಿದರು.

ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಅನಿಲ್ ಪಿ. ಮತ್ತು ಅಪ್ಪಣ್ಣ ನಿರೂಪಿಸಿದರು. ಉಪನ್ಯಾಸಕ ಎಸ್.ಜಿ. ಪಾಟೀಲ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.