ADVERTISEMENT

ಬೀದರ್‌: ಹಾಲಹಳ್ಳಿಯಲ್ಲಿ ರಸಗೊಬ್ಬರ ವಿತರಣೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 12:52 IST
Last Updated 23 ಜೂನ್ 2022, 12:52 IST
ಕಮಲನಗರ ತಾಲ್ಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ನಿಡೋದಾ ಪಿಕೆಪಿಎಸ್‍ನಿಂದ ರೈತರಿಗೆ ರಸಗೊಬ್ಬರ ವಿತರಣೆ ಮಾಡಲಾಯಿತು
ಕಮಲನಗರ ತಾಲ್ಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ನಿಡೋದಾ ಪಿಕೆಪಿಎಸ್‍ನಿಂದ ರೈತರಿಗೆ ರಸಗೊಬ್ಬರ ವಿತರಣೆ ಮಾಡಲಾಯಿತು   

ಬೀದರ್‌: ಕಮಲನಗರ ತಾಲ್ಲೂಕಿನ ನಿಡೋದಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವ್ಯಾಪ್ತಿಯ ಹಾಲಹಳ್ಳಿ ಗ್ರಾಮದಲ್ಲಿ ರೈತರಿಗೆ ಡಿಎಪಿ ರಸಗೊಬ್ಬರ ವಿತರಿಸಲಾಯಿತು.

ಸಂಘದ ಅಧ್ಯಕ್ಷ ದಯಾನಂದ ಬಿರಾದಾರ ಮಾತನಾಡಿ, ಡಿಸಿಸಿ ಬ್ಯಾಂಕ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರಸಗೊಬ್ಬರ ಸರಬರಾಜು ಮಾಡುತ್ತಿರುವುದರಿಂದ ರೈತರಿಗೆ ಬಹಳ ಅನುಕೂಲವಾಗಿದೆ ಎಂದರು.

ಪಿಕೆಪಿಎಸ್‍ನಲ್ಲಿ ರಸಗೊಬ್ಬರದ ಅಭಾವ ಇಲ್ಲ. ಹೀಗಾಗಿ ರೈತರು ಆತಂಕ ಪಡುವ ಅಗತ್ಯ ಇಲ್ಲ ಎಂದು ಸಂಘದ ನಿರ್ದೇಶಕ ಶಿವಕುಮಾರ ಭಾಲ್ಕೆ ಹೇಳಿದರು.

ADVERTISEMENT

ನಿಡೋದಾ ಪಿಕೆಪಿಎಸ್‍ಗೆ ಮೊದಲು 20 ಟನ್ ರಸಗೊಬ್ಬರ ಕಳುಹಿಸಲಾಗಿತ್ತು. ನಿಡೋದಾ ಗ್ರಾಮದ ಬಹುತೇಕ ರೈತರಿಗೆ ರಸಗೊಬ್ಬರ ವಿತರಿಸಲಾಗಿತ್ತು. ಆದರೆ, ಹಾಲಹಳ್ಳಿ ಗ್ರಾಮದ ರೈತರಿಗೆ ರಸಗೊಬ್ಬರದ ತುಸು ಕೊರತೆ ಉಂಟಾಗಿತ್ತು ಎಂದು ತಿಳಿಸಿದರು.

ರಸಗೊಬ್ಬರ ಸಮಸ್ಯೆ ಬಗ್ಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರ ಗಮನ ಸೆಳೆಯಲಾಗಿತ್ತು. ತಮ್ಮ ಮನವಿಗೆ ಸ್ಪಂದಿಸಿ ತಕ್ಷಣ 25 ಟನ್ ರಸಗೊಬ್ಬರ ಪೂರೈಸಿದ್ದಾರೆ ಎಂದು ಹೇಳಿದರು.

ಸಂಘದ ಉಪಾಧ್ಯಕ್ಷೆ ಜಗದೇವಿ ವೈಜಿನಾಥ, ಜಗನ್ನಾಥ ರಾಸೂರೆ, ಸೂರ್ಯಕಾಂತ ಅಜನೆ, ಚಾಂದೋರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರವೀಣ ಕಾರಬಾರಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ವಲ್ಲೇಪುರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.