ADVERTISEMENT

ಬಡವರಿಗೆ ಆಹಾರಧಾನ್ಯ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 13:16 IST
Last Updated 22 ಜೂನ್ 2021, 13:16 IST
ಬೀದರ್ ತಾಲ್ಲೂಕಿನ ರೇಕುಳಗಿ ಮೌಂಟ್‍ನ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ ಬಡವರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು
ಬೀದರ್ ತಾಲ್ಲೂಕಿನ ರೇಕುಳಗಿ ಮೌಂಟ್‍ನ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ ಬಡವರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು   

ಜನವಾಡ: ಬೆಂಗಳೂರಿನ ಮಹಾ ಬೋಧಿ ಸೊಸೈಟಿ ಸಂಸ್ಥಾಪಕ ಬುದ್ಧ ರಖ್ಖಿತ ಭಂತೆ ಅವರ 100ನೇ ಜನ್ಮದಿನದ ಪ್ರಯುಕ್ತ ಬೀದರ್ ತಾಲ್ಲೂಕಿನ ರೇಕುಳಗಿ ಮೌಂಟ್‍ನ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ ಕೋವಿಡ್‍ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು.

ರೇಕುಳಗಿ, ಬೋರಾಳ, ಮನ್ನಾಎಖ್ಖೆಳ್ಳಿ, ಮೀನಕೇರಾ ಕ್ರಾಸ್‍ನಲ್ಲಿ ವಾಸವಾಗಿರುವ ಬಡವರು, ಅಂಗವಿಕಲರು, ವಿಧವೆಯರು ಹಾಗೂ ನಿರಾಶ್ರಿತರಿಗೆ ವಿವಿಧ ಆಹಾರ ಸಾಮಗ್ರಿಗಳನ್ನು ಒಳಗೊಂಡ ಕಿಟ್ ವಿತರಣೆ ಮಾಡಲಾಯಿತು.

ಭಂತೆ ರೇವತ, ಭಂತೆ ಧರ್ಮಪಾಲ್, ಭಂತೆ ಬೋಧಿ, ಭಿಕ್ಕುಣಿ ಮಹಾ ಪ್ರಜಾಪತಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.