ಭಾಲ್ಕಿ: ತಾಲ್ಲೂಕಿನ ಚಳಕಾಪೂರ ವಾಡಿಯಲ್ಲಿ ಈಚೆಗೆ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಬಾಲಕರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಘಟನೆ ಕುರಿತು ಕುಟುಂಬದವರಿಂದ ಮಾಹಿತಿ ಪಡೆದುಕೊಂಡರು.
‘ಇಡೀ ಕುಟುಂಬಕ್ಕೆ ಆಧಾರ ಸ್ತಂಭದಂತಿದ್ದ, ಹೆತ್ತ ಮಗನನ್ನು ಕಳೆದುಕೊಂಡು ದುಃಖದಲ್ಲಿದ್ದೀರಿ. ನಾನು ನಿಮ್ಮ ಜತೆಗೆ ಇರುತ್ತೇನೆ’ ಎಂದು ಹೇಳುವ ಮೂಲಕ ಧೈರ್ಯ ತುಂಬಿದರು.
ಕುಟುಂಬದವರಿಗೆ ಸರ್ಕಾರದಿಂದ ಪರಿಹಾರ ಕೊಡಿಸಲು ಮುಖ್ಯಮಂತ್ರಿ ಅವರೊಂದಿಗೆ ಮಾತನಾಡುತ್ತೇನೆ ಎಂದು ಸಚಿವರು ತಿಳಿಸಿದರು.
ಸಚಿವರು ವೈಯಕ್ತಿಕವಾಗಿ ₹51,000 ನೀಡಿದರು. ಕುಟುಂಬಕ್ಕೆ ಎರಡು ಆಕಳುಗಳನ್ನು ಕೊಡಿಸುತ್ತೇನೆ. ಮಗಳ ಮದುವೆಗೂ ಸಹಾಯ ಮಾಡುತ್ತೇನೆ ಎಂದು ಸಚಿವರು ಭರವಸೆ ನೀಡಿದರು.
ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಹಾಗೂ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.