ADVERTISEMENT

ಜಿಲ್ಲಾ ಮಟ್ಟದ ನವ ಸಂಕಲ್ಪ ಶಿಬಿರ ಇಂದು

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 13:43 IST
Last Updated 3 ಜುಲೈ 2022, 13:43 IST
ಬೀದರ್‌ನ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಪಕ್ಷದ ನವ ಸಂಕಲ್ಪ ಶಿಬಿರದ ಪೂರ್ವ ಸಿದ್ಧತ ಸಭೆಯಲ್ಲಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಾತನಾಡಿದರು. ಆನಂದ ದೇವಪ್ಪ, ಮೀನಾಕ್ಷಿ ಸಂಗ್ರಾಮ, ಗೀತಾ ಚಿದ್ರಿ ಇದ್ದಾರೆ
ಬೀದರ್‌ನ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಪಕ್ಷದ ನವ ಸಂಕಲ್ಪ ಶಿಬಿರದ ಪೂರ್ವ ಸಿದ್ಧತ ಸಭೆಯಲ್ಲಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಾತನಾಡಿದರು. ಆನಂದ ದೇವಪ್ಪ, ಮೀನಾಕ್ಷಿ ಸಂಗ್ರಾಮ, ಗೀತಾ ಚಿದ್ರಿ ಇದ್ದಾರೆ   

ಬೀದರ್: ಜಿಲ್ಲಾ ಕಾಂಗ್ರೆಸ್ ಸಮಿತಿಯು ನಗರದ ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ಸೋಮವಾರ (ಜು.4) ಜಿಲ್ಲಾ ಮಟ್ಟದ ನವ ಸಂಕಲ್ಪ ಶಿಬಿರ ಹಮ್ಮಿಕೊಂಡಿದೆ.

ಬೆಳಿಗ್ಗೆ 8.30ಕ್ಕೆ ನೋಂದಣಿ, ಬೆಳಿಗ್ಗೆ 9.30ಕ್ಕೆ ಧ್ವಜಾರೋಹಣ, ಸೇವಾ ದಳದಿಂದ ಗೌರವ ವಂದನೆ ಹಾಗೂ ಬೆಳಿಗ್ಗೆ 10ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಉದ್ಘಾಟಿಸುವರು. ಕೆಪಿಸಿಸಿ ಬೀದರ್ ಜಿಲ್ಲಾ ಉಸ್ತುವಾರಿ ಡಾ. ಶರಣಪ್ರಕಾಶ ಪಾಟೀಲ, ಶಾಸಕರಾದ ರಾಜಶೇಖರ ಪಾಟೀಲ, ರಹೀಂಖಾನ್, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಡಾ. ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವಿಜಯಸಿಂಗ್, ಕೆ. ಪುಂಡಲೀಕರಾವ್ ಪಾಲ್ಗೊಳ್ಳುವರು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ವಹಿಸುವರು.

ADVERTISEMENT

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್, ಮುಂಚೂಣಿ ಘಟಕಗಳ ಅಧ್ಯಕ್ಷರು, ಸಂಯೋಜಕರು, ಹಿರಿಯ ಮುಖಂಡರು ಸೇರಿ 300 ಆಹ್ವಾನಿತರು ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪಕ್ಷವು ಪಕ್ಷ ಸಂಘಟನೆ ಹಾಗೂ ಸವಾಲುಗಳ ಉಪ ಸಮಿತಿ, ಸಹಕಾರ ಮತ್ತು ಕಾರ್ಮಿಕರ ಉಪ ಸಮಿತಿ, ಕೃಷಿ ಹಾಗೂ ಕೈಗಾರಿಕೆ ಉಪ ಸಮಿತಿ, ಪ್ರವಾಸೋದ್ಯಮ ಮತ್ತು ಅಭಿವೃದ್ಧಿ ಉಪ ಸಮಿತಿ, ಸಾಮಾಜಿಕ ನ್ಯಾಯ ಉಪ ಸಮಿತಿ, ಮಹಿಳಾ ಸಬಲೀಕರಣ ಮತ್ತು ನಾ ನಾಯಕಿ ಉಪ ಸಮಿತಿ ಹಾಗೂ ಯುವ ಸಬಲೀಕರಣ ಉಪ ಸಮಿತಿ ಸೇರಿ ಏಳು ಸಮಿತಿಗಳನ್ನು ರಚಿಸಿದೆ. ಶಿಬಿರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಸೇರಿದಂತೆ ಪಕ್ಷದ ಬಲವರ್ಧನೆ ಕುರಿತು ಚಿಂತನ-ಮಂಥನ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.