ADVERTISEMENT

ಬೀದರ್ | ಮುಖ್ಯಮಂತ್ರಿ ಬದಲಾವಣೆ ಬೇಡ: ಭದ್ರೇಶ್ವರ ಮಠದ ಶಿವಕುಮಾರ ಸ್ವಾಮಿ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 14:32 IST
Last Updated 23 ಜುಲೈ 2021, 14:32 IST
ಶಿವಕುಮಾರ ಸ್ವಾಮಿ
ಶಿವಕುಮಾರ ಸ್ವಾಮಿ   

ಬೀದರ್: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸಬಾರದು ಎಂದು ತಾಲ್ಲೂಕಿನ ಬಾವಗಿಯ ಭದ್ರೇಶ್ವರ ಮಠದ ಶಿವಕುಮಾರ ಸ್ವಾಮಿ ಒತ್ತಾಯಿಸಿದ್ದಾರೆ.

ಅಸಮರ್ಥರಾಗಿದ್ದರೆ ಬದಲಿಸಬಹುದಿತ್ತು. ಆದರೆ, ಯಡಿಯೂರಪ್ಪ ಅವರು ಸಮರ್ಥ ನಾಯಕರಗಿದ್ದಾರೆ. ಕೋವಿಡ್, ಪ್ರವಾಹ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರತಿ ಗ್ರಾಮಗಳಲ್ಲೂ ವೀರಶೈವ ಸಮಾಜದ ಮಠಗಳು ಇವೆ. ಸಮಾಜಕ್ಕೆ ಅವುಗಳ ಕೊಡುಗೆ ಅಪಾರವಾಗಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದರೆ ಎಲ್ಲರಿಗೂ ನೋವಾಗಲಿದೆ ಎಂದು ಹೇಳಿದ್ದಾರೆ.

ADVERTISEMENT

ಯಡಿಯೂರಪ್ಪ ಎಲ್ಲ ಧರ್ಮೀಯರನ್ನು ಸಮಾನವಾಗಿ ಕಾಣುತ್ತಾರೆ. ಹೀಗಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.