ಬೀದರ್: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಖಾಸಗಿ ವೈದ್ಯರು ಜಿಲ್ಲೆಯಲ್ಲಿ ಸೋಮವಾರ ಹೊರ ರೋಗಿಗಳ ವಿಭಾಗ(ಒಪಿಡಿ) ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಐಎಂಎ ದೇಶವ್ಯಾಪಿ ಮುಷ್ಕರದ ಕರೆಯ ಪ್ರಯುಕ್ತ ನಗರದಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ಒಪಿಡಿ ಬಂದ್ ಆಗಿದ್ದವು. ತುರ್ತು ಸೇವೆಗಳನ್ನು ಮಾತ್ರ ಒದಗಿಸಲಾಯಿತು. ಹೀಗಾಗಿ ರೋಗಿಗಳು ಪರದಾಡಿದರು.
‘ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ 6 ಗಂಟೆವರೆಗೂ ಒಪಿಡಿ ಬಂದ್ ಇರಲಿವೆ. ತುರ್ತು ಸೇವೆಗಳಿಗೆ ತೊಂದರೆಯಾಗದಂತೆ ವೈದ್ಯರ ಪ್ರತಿಭಟನೆ ನಡೆಸಲಾಗಿದೆ’ ಎಂದು ಐಎಂಎ ಬೀದರ್ ಘಟಕದ ಅಧ್ಯಕ್ಷ ಡಾ. ರಘು ಕೃಷ್ಣಮೂರ್ತಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.