ADVERTISEMENT

ಬೀದರ್: 4ರಿಂದ 7ರವರೆಗೆ ನಾಟಕೋತ್ಸವ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 5:46 IST
Last Updated 1 ಮಾರ್ಚ್ 2021, 5:46 IST
ವಿಜಯಕುಮಾರ ಸೋನಾರೆ
ವಿಜಯಕುಮಾರ ಸೋನಾರೆ   

ಬೀದರ್: ಜಿಲ್ಲಾ ಜಾನಪದ ಕಲಾವಿದರ ಬಳಗದ ವತಿಯಿಂದ ಮಾರ್ಚ್ 4ರಿಂದ 7ರ ವರೆಗೆ ನಗರದ ಡಾ.ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ನಾಟಕೋತ್ಸವ ಏರ್ಪಡಿಸಲಾಗಿದೆ ಎಂದು ಅಖಿಲ ಕರ್ನಾಟಕ ಕಲಾವಿದರ ಒಕ್ಕೂಟದ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಸೋನಾರೆ ತಿಳಿಸಿದ್ದಾರೆ.

ನಾಲ್ಕು ದಿನಗಳವರೆಗೆ ಸಾಮಾಜಿಕ, ಧಾರ್ಮಿಕ, ಐತಿಹಾಸಿಕ, ಪೌರಾಣಿಕ ನಾಟಕಗಳ ಪ್ರದರ್ಶನ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಸಾಣೇಹಳ್ಳಿಯ ಶಿವ ಸಂಚಾರ ತಂಡದ ಕಲಾವಿದರು ‘ಜೀವ ಇದ್ದರೆ ಜೀವನ’, ಶರಣ ಡೋಹರ ಕಕ್ಕಯ್ಯ, ಬಳ್ಳಾರಿ ಜಿಲ್ಲೆಯ ಪುರುಷೋತ್ತಮ ಹಂದ್ಯಾಳ ತಂಡವರು ‘ದನ ಕಾಯುವರ ದೊಡ್ಡಾಟ’ ಮತ್ತು ‘ಮುತ್ಯಾನ ಬಬಲಾದ, ಶೀ ಚನ್ನವೀರೇಶ್ವರ ನಾಟ್ಯ ಸಂಘದವರು ‘ರತ್ನಮಾಂಗಲ್ಯ’ ನಾಟಕ ಪ್ರದರ್ಶಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಬಿ. ಮಂಜಮ್ಮ ಜೋಗತಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.