ADVERTISEMENT

ಶ್ರೀರಾಮ ಫೈನಾನ್ಸ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚಾಲಕರ ಒಕ್ಕೂಟ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2024, 15:39 IST
Last Updated 6 ಜೂನ್ 2024, 15:39 IST
ಕರ್ನಾಟಕ ಚಾಲಕರ ಒಕ್ಕೂಟದವರು ಬೀದರ್‌ನ ಛತ್ರಪತಿ ಶಿವಾಜಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು‌
ಕರ್ನಾಟಕ ಚಾಲಕರ ಒಕ್ಕೂಟದವರು ಬೀದರ್‌ನ ಛತ್ರಪತಿ ಶಿವಾಜಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು‌   

ಬೀದರ್‌: ಚಾಲಕರಿಗೆ ಬೆದರಿಕೆ ಒಡ್ಡುತ್ತಿರುವ ಶ್ರೀರಾಮ ಫೈನಾನ್ಸ್‌ನವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಚಾಲಕರ ಒಕ್ಕೂಟದವರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಡಾ.ಅಂಬೇಡ್ಕರ್‌ ವೃತ್ತದಲ್ಲಿ ಸೇರಿದ ಚಾಲಕರು ಶ್ರೀರಾಮ ಫೈನಾನ್ಸ್‌ನವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಅವರ ಕಾರ್ಯವೈಖರಿಯನ್ನು ಖಂಡಿಸಿದರು. ಆನಂತರ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್‍ಯಾಲಿ ನಡೆಸಿ, ಮನವಿ ಪತ್ರ ಸಲ್ಲಿಸಿದರು.

ಯಾರು ಶ್ರೀರಾಮ ಫೈನಾನ್ಸ್‌ನವರ ಬಳಿ ವಾಹನದ ಮೇಲೆ ಸಾಲ ಪಡೆದಿದ್ದಾರೋ ಅಂತಹವರು ಅವರ ಬಳಿಯಲ್ಲೇ ಇನ್‌ಶೂರೆನ್ಸ್‌ ಮಾಡಿಸಿಕೊಳ್ಳಬೇಕು ಎಂದು ಬೆದರಿಕೆ ಹಾಕುತ್ತಿದ್ದಾರೆ. ಚಾಲಕರ ಗಮನಕ್ಕೂ ತರದೇ ವಾಹನಗಳನ್ನು ಸೀಜ್‌ ಮಾಡುತ್ತಿದ್ದಾರೆ. ಕಡು ಬಡ ಚಾಲಕರಿಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದರು.

ADVERTISEMENT

ಚಾಲಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಿ, ಶ್ರೀರಾಮ ಫೈನಾನ್ಸ್‌ನವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಒಕ್ಕೂಟದ ಜಿಲ್ಲಾ ಅಧ್ಯಕ್ಷ ಹುಲ್ಲೆಪ್ಪಾ ಡುಮ್ಮೆ, ಉಪಾಧ್ಯಕ್ಷ ವೀರೇಶ ಬಿರಾದಾರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.