ADVERTISEMENT

ಹುಮನಾಬಾದ್: ಭೂಮಿಯಲ್ಲಿ ಶಬ್ದ: ಆತಂಕ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2021, 7:22 IST
Last Updated 9 ಅಕ್ಟೋಬರ್ 2021, 7:22 IST

ಹುಮನಾಬಾದ್: ತಾಲ್ಲೂಕಿನ ಕುಮಾರ್ ಚಿಂಚೋಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಭೂಮಿಯಲ್ಲಿ ಆಗಾಗ ನಿಗೂಢ ಶಬ್ದ ಕೇಳಿ ಬರುತ್ತಿದೆ. ಭೂಕಂಪ ಇರಬಹುದು ಎಂದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ಹೇಳಿದ್ದಾರೆ.

‘ಕಳೆದ ಕೆಲ ದಿನಗಳ ಹಿಂದೆ ಕ್ಷೇತ್ರದ ಹುಣಸನಾಳ ಗ್ರಾಮದಲ್ಲಿಯೂ ಇದೇ ರೀತಿ ಶಬ್ದ ಕೇಳಿ ಬಂದಿತ್ತು. ಹೀಗಾಗಿ ಭೂಗರ್ಭ ಶಾಸ್ತ್ರಜ್ಞರ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿತ್ತು. ಸಮಸ್ಯೆ ಇಲ್ಲ ಎಂದು ತಿಳಿಸಿತ್ತು. ಈಗ ಕುಮಾರ ಚಿಂಚೋಳಿ ಗ್ರಾಮದಲ್ಲಿ ಶಬ್ದ ಕೇಳಿ ಬರುತ್ತಿರುವುದರಿಂದ ಗ್ರಾಮಸ್ಥರು ಆತಂಕಗೊಂಡಿರುವುದು ಗಮನಕ್ಕೆ ಬಂದಿದೆ. ದೂರವಾಣಿ ಮೂಲಕ ಗ್ರಾಮದ ಪ್ರಮುಖರ ಜತೆ ಮಾತನಾಡಿ ಧೈರ್ಯ ಹೇಳಿದ್ದೇನೆ. ಶನಿವಾರ (ಅ.9) ಮಧ್ಯಾಹ್ನ ಅಧಿಕಾರಿಗಳ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡುತ್ತೇನೆ’ ಎಂದು ಶಾಸಕ ರಾಜಶೇಖರ ಪಾಟೀಲ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.