ADVERTISEMENT

ಶಿಕ್ಷಣ ಸೇವಾ ಪ್ರಶಸ್ತಿ ಪ್ರದಾನ ನಾಳೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 13:11 IST
Last Updated 19 ಸೆಪ್ಟೆಂಬರ್ 2021, 13:11 IST

ಬೀದರ್‌: ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ವತಿಯಿಂದ ಕರ್ನಾಟಕ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಸೆ.20ರಂದು ಬೆಳಿಗ್ಗೆ 11.30ಕ್ಕೆ ನಗರದ ರಾಣಿ ಕಿತ್ತೂರು ಚೆನ್ನಮ್ಮ ವೃತ್ತ ಸಮೀಪದ ಹೋಟೆಲ್‌ ಶ್ರೀ ಕೃಷ್ಣ ದರ್ಶನಿ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆಯಲಿದೆ.

ವೀರ ಕನ್ನಡಿಗರ ಸೇನೆ ರಾಜ್ಯ ಘಟಕದ ಅಧ್ಯಕ್ಷ ಅಮೃತ ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ
ನಗರಸಭೆ ಸದಸ್ಯ ದಿಗಂಬರ ಮಡಿವಾಳ, ಸಿಪಿಐ ಮಲ್ಲಮ ಚೌಬೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ವಾರ್ತಾ ಅಧಿಕಾರಿ ಗವಿಸಿದ್ದಪ್ಪ ಹೊಸಮನಿ, ದೇವೇಂದ್ರ ಸೋನಿ, ಕವಿತಾ ಹುಷಾರೆ. ಮಂಗಲಾ ಮರಕಲೆ ಹಾಗೂ ಸುನೀತಾ ಬಿಕ್ಲೆ ಪಾಲ್ಗೊಳ್ಳಲಿದ್ದಾರೆ.

ಸಮಾರಂಭದಲ್ಲಿ 25 ಸಾಧಕ ಶಿಕ್ಷಕರಿಗೆ ಸನ್ಮಾನ ಮಾಡಲಾಗುವುದು ಎಂದು ಸಂಘಟನೆ ರಾಜ್ಯಧ್ಯಕ್ಷ ಸುಬ್ಬಣ್ಣ ಕರಕನಳ್ಳಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.