ಬೀದರ್: ಚುನಾವಣೆ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಇಲ್ಲಿಯ ಹೆಚ್ಚುವರಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯವು ಬೀದರ್ ನಗರಸಭೆಯ ವಾರ್ಡ್ ಸಂಖ್ಯೆ 21ರ ಜೆಡಿಎಸ್ ಸದಸ್ಯೆ ಸಂತೋಷಕುಮಾರಿ ಅರುಣ ಅವರಿಗೆ ನೋಟಿಸ್ ನೀಡಿದೆ.
ಹೆಚ್ಚುವರಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಆರ್.ಪಿ. ಗೌಡ ಅವರು ಜೂನ್ 18 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸದಸ್ಯೆಗೆ ಸೂಚಿಸಿದ್ದಾರೆ ಎಂದು ಕಾಂಗ್ರೆಸ್ನ ಪರಾಜಿತ ಅಭ್ಯರ್ಥಿ ಸಂಗೀತಾ ಶ್ರೀಮಂತ ಧಬಾಲೆ ತಿಳಿಸಿದ್ದಾರೆ.
ವಾರ್ಡ್ ಸಂಖ್ಯೆ 21ರ ಚುನಾವಣೆಗೆ ಸಂಬಂಧಿಸಿದಂತೆ ಸಂಗೀತಾ ಶ್ರೀಮಂತ ಧಬಾಲೆ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಸಂತೋಷಕುಮಾರಿ ಅರುಣ ಬಸವನಗರ ನಿವಾಸಿಯಾಗಿದ್ದಾರೆ. ವಾರ್ಡ್ ಸಂಖ್ಯೆ 22 ರ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇದೆ. ಚುನಾವಣೆ ಘೋಷಣೆಯಾದ ನಂತರ ಅವರು ವಾರ್ಡ್ ಸಂಖ್ಯೆ 21 ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿದ್ದಾರೆ. ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅವರ ನಾಮಪತ್ರ ಸ್ವೀಕರಿಸಿರುವುದು ಕಾನೂನು ಬಾಹೀರವಾಗಿದೆ ಎಂದು ಆರೋಪಿಸಿದ್ದಾರೆ.
ಅರ್ಜಿದಾರರ ಪರ ವಕೀಲ ಅಶೋಕ ಮಾನೂರೆ ವಾದ ಮಂಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.