ADVERTISEMENT

ಉದ್ಯಾನ, ರಸ್ತೆ ಜಾಗ ಅತಿಕ್ರಮಣ: ಆರೋಪ

ಕೈಗಾರಿಕಾ ಮಂಡಳಿ ಕಾರ್ಯದರ್ಶಿಗೆ ವೇದಿಕೆ ಮನವಿ ಪತ್ರ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 8:51 IST
Last Updated 28 ಮಾರ್ಚ್ 2023, 8:51 IST
ಬೀದರ್‌ನ ನೌಬಾದ್ ಕೈಗಾರಿಕಾ ಪ್ರದೇಶದಲ್ಲಿನ ಜಾಗ ಅತಿಕ್ರಮಣ ತೆರವುಗೊಳಿಸಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ವಸಂತಕುಮಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಬೀದರ್‌ನ ನೌಬಾದ್ ಕೈಗಾರಿಕಾ ಪ್ರದೇಶದಲ್ಲಿನ ಜಾಗ ಅತಿಕ್ರಮಣ ತೆರವುಗೊಳಿಸಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ವಸಂತಕುಮಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್: ನಗರದ ನೌಬಾದ್‍ನ ಕೈಗಾರಿಕಾ ಪ್ರದೇಶದಲ್ಲಿನ ಉದ್ಯಾನ ಹಾಗೂ ರಸ್ತೆ ಜಾಗ ಅತಿಕ್ರಮಣ ಮಾಡಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಆರೋಪಿಸಿದೆ.

ವೇದಿಕೆ ಪದಾಧಿಕಾರಿಗಳು ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಗಣೇಶ ಪಾಟೀಲ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ವಸಂತಕುಮಾರ ಅವರಿಗೆ ಈ ಕುರಿತು ದೂರು ಸಲ್ಲಿಸಿದರು.

ನೌಬಾದ್ ಪ್ರದೇಶದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಗೆ ಸೇರಿದ 76.68 ಎಕರೆ ಜಾಗ ಇದೆ. ವಸತಿ, ವಾಣಿಜ್ಯ ನಿವೇಶನ, ಉದ್ಯಾನ ಹಾಗೂ ರಸ್ತೆಗೆ ಜಾಗ ಹಂಚಿಕೆ ಮಾಡಲಾಗಿದೆ. ಆದರೆ, ಭೂಗಳ್ಳರು ರಸ್ತೆ, ಉದ್ಯಾನ ಹಾಗೂ ಚರಂಡಿ ಸ್ಥಳ ಅತಿಕ್ರಮಣ ಮಾಡಿಕೊಂಡಿದ್ದಾರೆ. ಖಾಸಗಿ ನಿವೇಶನಗಳನ್ನಾಗಿ ಪರಿವರ್ತಿಸಿಕೊಂಡಿದ್ದಾರೆ. ಇದರಲ್ಲಿ ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎಂದು ದೂರಿದರು.

ADVERTISEMENT

ಅತಿಕ್ರಮಣ ಸಂಬಂಧ ಜಿಲ್ಲಾಡಳಿತಕ್ಕೆ ಅನೇಕ ಬಾರಿ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಕೂಡಲೇ ಅತಿಕ್ರಮಣವಾದ ಕೈಗಾರಿಕಾ ಪ್ರದೇಶದ ಜಾಗ ಸ್ವಾಧೀನಕ್ಕೆ ತೆಗೆದುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವೇದಿಕೆಯ ಭಾಲ್ಕಿ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಸುದೀಪ್ ಡಿ. ತೂಗಾವೆ, ನಿಟ್ಟೂರು ವಲಯ ಘಟಕದ ಅಧ್ಯಕ್ಷ ಬಸವರಾಜ ಕಾರಬಾರಿ, ಕಾಶೀನಾಥ ಕಲ್ಕಪುರೆ, ಸುರೇಶ ಬಿರಾದಾರ, ಲೋಕೇಶ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.