ಭಾಲ್ಕಿ: ತಾಲ್ಲೂಕಿನ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ ಕಾರ್ಖಾನೆಯ 2023-24ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಏ.1ರಂದು ಮುಕ್ತಾಯಗೊಳಿಸಲಾಗುವುದು ಎಂದು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಂಗಾಮಿಗೆ ಪೂರೈಸುವ ಕಬ್ಬನ್ನು ಕಟಾವು ಆದೇಶದ ಪತ್ರದ ಅನ್ವಯ ಕಬ್ಬು ಕಟಾವು ಮಾಡಿ ಏ.1ರ ಮಧ್ಯಾಹ್ನ 2 ಗಂಟೆಯ ಒಳಗೆ ಕಾರ್ಖಾನೆಗೆ ಪೂರೈಸಬೇಕು. ಅವಧಿಯ ನಂತರ ಕಬ್ಬು ಕಟಾವುಗೊಳ್ಳದೇ ಉಳಿಯುವ ಕಬ್ಬಿಗೆ ಕಾರ್ಖಾನೆಯು ಜವಾಬ್ದಾರ ಆಗಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.