ADVERTISEMENT

ಬಸವಕಲ್ಯಾಣ: ನಕಲಿ ವೈದ್ಯನ ಆಸ್ಪತ್ರೆಗೆ ಬೀಗಮುದ್ರೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2023, 16:07 IST
Last Updated 15 ಡಿಸೆಂಬರ್ 2023, 16:07 IST
ಆರೋಗ್ಯ ಇಲಾಖೆಯ ಅಧಿಕಾರಿಗಳು ಬಸವಕಲ್ಯಾಣ ತಾಲ್ಲೂಕಿನ ಲಾಡವಂತಿಯ ನಕಲಿ ಆಸ್ಪತ್ರೆ ಮೇಲೆ ದಾಳಿ ನಡೆಸಿ ಬೀಗಮುದ್ರೆ ಹಾಕಿದರು
ಆರೋಗ್ಯ ಇಲಾಖೆಯ ಅಧಿಕಾರಿಗಳು ಬಸವಕಲ್ಯಾಣ ತಾಲ್ಲೂಕಿನ ಲಾಡವಂತಿಯ ನಕಲಿ ಆಸ್ಪತ್ರೆ ಮೇಲೆ ದಾಳಿ ನಡೆಸಿ ಬೀಗಮುದ್ರೆ ಹಾಕಿದರು   

ಬೀದರ್‌: ಬಸವಕಲ್ಯಾಣ ತಾಲ್ಲೂಕಿನ ಲಾಡವಂತಿಯಲ್ಲಿ ಕೋಲ್ಕತ್ತದ ನಕಲಿ ವೈದ್ಯ ಹರಿಕೃಷ್ಣ ಎಂಬಾತ ನಡೆಸುತ್ತಿದ್ದ ಆಸ್ಪತ್ರೆ ಮೇಲೆ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ಆಸ್ಪತ್ರೆಗೆ ಬೀಗಮುದ್ರೆ ಹಾಕಿದ್ದಾರೆ.

ಸಾರ್ವಜನಿಕರಿಂದ ಬಂದ ದೂರುಗಳನ್ನು ಆಧರಿಸಿ ಬಸವಕಲ್ಯಾಣ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಅಶೋಕ ಮೈಲಾರೆ ಮತ್ತು ಜಿಲ್ಲಾ ಕೆ.ಪಿ.ಎಂ.ಇ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದಿಲೀಪ ಡೋಂಗ್ರೆ, ತಂಡದ ಸದಸ್ಯರು ದಾಳಿ ನಡೆಸಿ ಆಸ್ಪತ್ರೆ ಸೀಜ್‌ ಮಾಡಿಸಿದ್ದಾರೆ.

ಪೋಲಿಸ್ ಹೆಡ್ ಕಾನ್‌ಸ್ಟೆಬಲ್‌ಗಳಾದ ವೆಂಕಟ, ಶಿವರಾಜ, ಮಹೇಶ್ವರ ರೆಡ್ಡಿ, ಬಸವಕಲ್ಯಾಣ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ರಾಜಕುಮಾರ, ಪ್ರಶಾಂತ, ಸದಾನಂದ, ಲಾಡಂವತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅಭಿಷೇಕ ಕನಕ ಅವರು ದಾಳಿ ವೇಳೆ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.