ಚಿಟಗುಪ್ಪ: ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಗುರುವಾರ ಸಾಲಬಾಧೆ ತಾಳದೆ ರೈತ ಮಾರುತಿ ಕಲಶೆಟ್ಟಿ (45) ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.
ತುಂಡು ಭೂಮಿ ಹೊಂದಿದ್ದ ಇವರು ಗ್ರಾಮದ ಹಲವು ರೈತರ ಹೊಲಗಳನ್ನು ಪಾಲದ ಕರಾರಿನಲ್ಲಿ ಸಾಗುವಳಿ ಮಾಡಿಕೊಂಡಿದ್ದರು. ಕೃಷಿ ಚಟುವಟಿಕೆಗೆ ಖಾಸಗಿ ಮೂಲಗಳಿಂದ ಸಾಲ ಪಡೆದಿದ್ದರು. ಸಾಲ ಮರು ಪಾವತಿಸಲಾಗದೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ ತಿಳಿಸಲಾಗಿದೆ.
ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.