ADVERTISEMENT

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರೈತ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 4:30 IST
Last Updated 5 ಅಕ್ಟೋಬರ್ 2021, 4:30 IST
ಅನಿಲ್
ಅನಿಲ್   

ಹುಮನಾಬಾದ್: ತಾಲ್ಲೂಕಿನ ಕುಮಾರ್‌ಚಿಂಚೋಳಿ ಗ್ರಾಮದ ರೈತರೊಬ್ಬರು ಭಾನುವಾರ ರಾತ್ರಿ 8 ಗಂಟೆ ಸುಮಾರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನಿಲ್ (45) ಆತ್ಮಹತ್ಯೆ ಮಾಡಿಕೊಂಡವರು. ಗ್ರಾಮದ ಹೊರವಲಯದಲ್ಲಿ ಅವರ ತಂದೆ ಹೆಸರಿನಲ್ಲಿ 3 ಎಕರೆ ಜಮೀನು ಇದ್ದು, ಅದನ್ನು ಉಳುಮೆ ಮಾಡುತ್ತಿದ್ದರು. ಪಿಕೆಪಿಎಸ್, ಕೆಜಿಬಿ ಹಾಗೂ ಎಸ್‍ಬಿಐ ಬ್ಯಾಂಕ್ ಸೇರಿದಂತೆ ವಿವಿಧೆಡೆ ಒಟ್ಟು ₹2.5 ಲಕ್ಷ ಸಾಲ ಮಾಡಿದ್ದರು. ಹಲವು ವರ್ಷಗಳಿಂದ ನಿರೀಕ್ಷಿತ ಇಳುವರಿ ಬರದ ಕಾರಣ ಸಾಲ ತೀರಿಸಲಾಗಿದೆ ಸಂಕಷ್ಟಕ್ಕೀಡಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಗ್ರಾಮದಲ್ಲಿ ಒಂದು ಪುಟ್ಟ ಹೋಟೆಲ್ ನಡೆಸುತ್ತಿದ್ದರು. ಇತ್ತಿಚೆಗೆ ವ್ಯಾಪಾರ ಸಹ ಸರಿಯಾಗಿ ನಡೆಯುತ್ತಿರಲಿಲ್ಲ. ಇದರಿಂದ ಬಹಳ ನೊಂದಿದ್ದರು ಎಂದು ಮೃತರ ಪತ್ನಿ ವಿಜಯ ಲಕ್ಷ್ಮಿ ತಿಳಿಸಿದ್ದಾರೆ. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಹುಮನಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.