ADVERTISEMENT

ರೈತರ ಆದಾಯ ದ್ವಿಗುಣ: ಅಣಬೆ ಪಾತ್ರ ಮಹತ್ವದ್ದು

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 15:48 IST
Last Updated 26 ಸೆಪ್ಟೆಂಬರ್ 2021, 15:48 IST

ಜನವಾಡ: ರೈತರ ಆದಾಯ ದ್ವಿಗುಣಗೊಳಿಸುವಲ್ಲಿ ಅಣಬೆ ಪಾತ್ರ ಮಹತ್ವದ್ದಾಗಿದೆ ಎಂದು ರಾಯಚೂರಿನ ಕೃಷಿ ಕಾಲೇಜಿನ ಗೃಹ ವಿಜ್ಞಾನ ಸಹಾಯಕ ಪ್ರಾಧ್ಯಾಪಕಿ ಡಾ.ಅನುಪಮಾ ನುಡಿದರು.

ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಕೆವಿಕೆ ಕೃಷಿ ಪಾಠಶಾಲೆ ಸರಣಿಯಲ್ಲಿ ರೈತರಿಗೆ ಆನ್‍ಲೈನ್‍ನಲ್ಲಿ ಶನಿವಾರ ಅಣಬೆ ಉತ್ಪಾದನೆ ತಾಂತ್ರಿಕತೆಗಳು ಕುರಿತು ನಡೆಸಿದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಣಬೆ ಆರೋಗ್ಯಕ್ಕೆ ಬಹಳ ಉತ್ತಮವಾಗಿದೆ. ಕೃಷಿ ಭೂಮಿ ಇಲ್ಲದಿದ್ದರೂ ಅಣಬೆ ಬೇಸಾಯ ಮಾಡಿ ಸಂಪಾದನೆ ಮಾಡಬಹುದು ಎಂದು ತಿಳಿಸಿದರು.

ADVERTISEMENT

ಅಣಬೆ ಕೃಷಿ ಮಹತ್ವ, ಅಣಬೆ ಉತ್ಪಾದನೆಗೆ ಇರುವ ಅವಕಾಶಗಳು, ಕೃಷಿ ವ್ಯವಹಾರ ಚಟುವಟಿಕೆ, ಪ್ರಾಯೋಗಿಕ ಆಯಸ್ಟರ್, ಹಾಲು ಅಣಬೆ ಬೇಸಾಯ ವಿಧಾನ ಹಾಗೂ ಮೌಲವರ್ಧನೆ ಕುರಿತು ಅವರು ವಿವರವಾದ ಮಾಹಿತಿ ನೀಡಿದರು.

ಯುವಕರು ಅಣಬೆ ಬೇಸಾಯಕ್ಕೆ ಒಲವು ತೋರಬೇಕು. ಕೃಷಿ ವಿಜ್ಞಾನ ಕೇಂದ್ರವು ಗುಣಮಟ್ಟದ ಕೃಷಿ ಉತ್ಪನ್ನಗಳ ಉತ್ಪಾದನೆಗೆ ಪೂರಕವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಹೇಳಿದರು.

ಬೀದರ್, ಕಲಬುರ್ಗಿ, ಬೆಳಗಾವಿ, ಕೋಲಾರ, ಮೈಸೂರು, ಹಾಸನ, ಬಳ್ಳಾರಿ, ರಾಯಚೂರು ಮೊದಲಾದ ಜಿಲ್ಲೆಗಳ 78 ರೈತರು ತರಬೇತಿಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.