ಕಮಲನಗರ: ತಾಲ್ಲೂಕಿನ ಬೆಳಕುಣಿ(ಭೋ) ಗ್ರಾಮದ ಸುನೀಲ ರಾಜೇಂದ್ರರಾವ ಸಿಂಧೆ ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 812ನೇ ರ್ಯಾಂಕ್ ಗಳಿಸಿ ತಾಲ್ಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ.
ಸುನೀಲ್ ಅವರದ್ದು ಸಾಮಾನ್ಯ ರೈತ ಕುಟುಂಬ. ಪ್ರೌಢ ಶಿಕ್ಷಣವನ್ನು ಅಹಮದ್ಪುರ್, ಪಿಯುಸಿ ಲಾತೂರ್ ಹಾಗೂ ಮುಂಬೈನಲ್ಲಿ ಎಂಜಿನಿಯರಿಂಗ್ ಶಿಕ್ಷಣ ಪೂರ್ಣಗೊಳಿಸಿ ಕ್ಯಾಂಪಸ್ ನೇಮಕಾತಿಯಲ್ಲಿ ಆಯ್ಕೆಯಾಗಿ ಟಿಸಿಎಸ್ನಲ್ಲಿ ಕಾರ್ಯನಿರ್ವಹಿಸಿದ್ದರು. ಆದರೆ ಯುಪಿಎಸ್ಸಿ ಪರೀಕ್ಷೆ ಬರೆಯಬೇಕೆಂಬ ಛಲದಿಂದ ಎರಡು ಬಾರಿ ಪರೀಕ್ಷೆ ಬರೆದಿದ್ದರೂ ಫಲ ಸಿಕ್ಕಿರಲಿಲ್ಲ.
ಮೂರನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಇವರ ಅದ್ಭುತ ಸಾಧನೆಗೆ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.