ADVERTISEMENT

ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2022, 3:09 IST
Last Updated 9 ಸೆಪ್ಟೆಂಬರ್ 2022, 3:09 IST
ಮಾಣಿಕ ಖಾನಾಪುರೆ
ಮಾಣಿಕ ಖಾನಾಪುರೆ   

ಔರಾದ್: ತಾಲ್ಲೂಕಿನ ಧುಪತ ಮಹಗಾಂವ್ ಗ್ರಾಮದ ರೈತ ಮಾಣಿಕ ಖಾನಾಪುರೆ(32) ವಿಷ ಕುಡಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಸೆ.2ರಂದು ವಿಷ ಸೇವಿಸಿದ್ದರಿಂದ ಚಿಕಿತ್ಸೆಗಾಗಿ ಸಂತಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚುವರಿ ಚಿಕಿತ್ಸೆಗಾಗಿ ಬೀದರ್ ಜಿಲ್ಲಾ ಆಸ್ಪತ್ರೆಗೆ ಕರೆತರಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟರು.

ಕುಟುಂಬದ ಕೃಷಿ ಕೆಲಸವನ್ನು ಮಾಣಿಕ ನೋಡಿಕೊಳ್ಳುತ್ತಿದ್ದರು. ಎರಡು ವರ್ಷದಿಂದ ಸರಿಯಾಗಿ ಬೆಳೆ ಬಾರದೆ ಕಾರಣ ಸಾಲವಾಗಿತ್ತು. ಇದ ರಿಂದ ಮನನೊಂದು ಆತ್ಮಹತ್ಯೆ ಮಾಡಿ ಕೊಂದ್ದಾರೆ ಎಂದು ಗ್ರಾಮಸ್ಥರು ಹೇಳಿ ದರು. ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.