ADVERTISEMENT

ಜನವಾಡ: ಫಸಲ್ ಬಿಮಾ ಯೋಜನೆ ಮಾಹಿತಿ ಕಾರ್ಯಕ್ರಮ ಇಂದು

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 14:39 IST
Last Updated 23 ಜುಲೈ 2021, 14:39 IST
ಸುನೀಲಕುಮಾರ ಎನ್.ಎಂ
ಸುನೀಲಕುಮಾರ ಎನ್.ಎಂ   

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಕೆ.ವಿ.ಕೆ ಕೃಷಿ ಪಾಠಶಾಲೆ ಸರಣಿಯಲ್ಲಿ ಶನಿವಾರ (ಜು.24) ಬೆಳಿಗ್ಗೆ 11ಕ್ಕೆ ರೈತರಿಗೆ ಆನ್‍ಲೈನ್‍ನಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಬೆಳೆ ವಿಮೆ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಬೆಂಗಳೂರಿನ ಬೆಳೆ ವಿಮೆ ಯೋಜನೆ ಅಧಿಕಾರಿ ವಿನಯಕುಮಾರ, ಕಲಬುರ್ಗಿಯ ಮಹಮ್ಮದ್ ಮನ್ಸೂರ್ ಶೇಕ್ ಅವರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಸಮಗ್ರ ಮಾಹಿತಿ ನೀಡಲಿದ್ದಾರೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ ತಿಳಿಸಿದ್ದಾರೆ.

ಅತಿವೃಷ್ಟಿ, ಅನಾವೃಷ್ಟಿ ಮೊದಲಾದ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಉಂಟಾದಾಗ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ರೈತರ ನೆರವಿಗೆ ಬರಲಿದೆ. ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಜನೆ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಸಲಹೆ ಮಾಡಿದ್ದಾರೆ.

ADVERTISEMENT

ರೈತರು ಗೂಗಲ್ ಮೀಟ್ ಲಿಂಕ್ meet.google.com/rkr-pbvj-psz ಬಳಸಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.