ADVERTISEMENT

ಹುಮನಾಬಾದ್: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2023, 9:54 IST
Last Updated 6 ಜುಲೈ 2023, 9:54 IST
   

ಹುಮನಾಬಾದ್ (ಬೀದರ್‌ ಜಿಲ್ಲೆ): ತಾಲ್ಲೂಕಿನ ಧುಮ್ಮನಸೂರ್ ಹೊರವಲಯದಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ವ್ಯಕ್ತಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

ಅಂಕುಶ್ ಹುಚ್ಚೇನೂರ್ (28), ಇವರ ಮಗಳು ತನು (6), ಮಗ ಸಾಯಿರಾಜ್ (5) ಮೃತಪಟ್ಟವರು. ಮಕ್ಕಳೊಂದಿಗೆ ತಂದೆ ಧುಮ್ಮನಸೂರ್ ಹೊರವಲಯದ ಸೇಡೋಳ ರಸ್ತೆಯಲ್ಲಿರುವ ಹೊಲದ‌‌ ಭಾವಿಗೆ ಬುಧವಾರ ತಡರಾತ್ರಿ ಹೋಗಿ ಹಾರಿರುವ ಶಂಕೆ ವ್ಯಕ್ತವಾಗಿದೆ.

ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬಂದು, ಮೃತದೇಹಗಳನ್ನು ಮೇಲಕ್ಕೆ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.