ADVERTISEMENT

ಜನಪದ ಸಂಸ್ಕೃತಿ ಉಳಿವಿಗೆ ಶ್ರಮ

​ಪ್ರಜಾವಾಣಿ ವಾರ್ತೆ
Published 23 ಜನವರಿ 2022, 15:54 IST
Last Updated 23 ಜನವರಿ 2022, 15:54 IST
ಬೀದರ್‌ನ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಆಯೋಜಿಸಿದ್ದ ಜಾನಪದ ಜಗಲಿ ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಿ.ಬಿ. ನಾಯಕ್ ಉದ್ಘಾಟಿಸಿದರು. ರಾಜಕುಮಾರ ಹೆಬ್ಬಾಳೆ, ಎಸ್.ಬಿ. ಕುಚಬಾಳ, ನಿಜಲಿಂಗಪ್ಪ ತಗಾರೆ, ಜಗನ್ನಾಥ ಹೆಬ್ಬಾಳೆ, ಶಾಂತಕುಮಾರ ಪಾಟೀಲ, ಮಲ್ಲಿಕಾರ್ಜುನ ಸ್ವಾಮಿ, ಶಿವಶರಣಪ್ಪ ಗಣೇಶಪುರ, ಪ್ರಕಾಶ ಕನ್ನಾಳೆ, ಮಹಾರುದ್ರ ಡಾಕುಳಗಿ ಇದ್ದರು
ಬೀದರ್‌ನ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಆಯೋಜಿಸಿದ್ದ ಜಾನಪದ ಜಗಲಿ ಕಾರ್ಯಕ್ರಮವನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಿ.ಬಿ. ನಾಯಕ್ ಉದ್ಘಾಟಿಸಿದರು. ರಾಜಕುಮಾರ ಹೆಬ್ಬಾಳೆ, ಎಸ್.ಬಿ. ಕುಚಬಾಳ, ನಿಜಲಿಂಗಪ್ಪ ತಗಾರೆ, ಜಗನ್ನಾಥ ಹೆಬ್ಬಾಳೆ, ಶಾಂತಕುಮಾರ ಪಾಟೀಲ, ಮಲ್ಲಿಕಾರ್ಜುನ ಸ್ವಾಮಿ, ಶಿವಶರಣಪ್ಪ ಗಣೇಶಪುರ, ಪ್ರಕಾಶ ಕನ್ನಾಳೆ, ಮಹಾರುದ್ರ ಡಾಕುಳಗಿ ಇದ್ದರು   

ಬೀದರ್: ಕರ್ನಾಟಕ ಜಾನಪದ ಪರಿಷತ್ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರ ಬೀದರ್ ಜಿಲ್ಲೆಯಲ್ಲಿ ಜನಪದ ಸಂಸ್ಕೃತಿ ಉಳಿವಿಗೆ ನಿರಂತರ ಪ್ರಯತ್ನಿಸುತ್ತಿವೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ಬಿ. ನಾಯಕ್ ಹೇಳಿದರು.


ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಏರ್ಪಡಿಸಿದ್ದ ಜಾನಪದ ಜಗಲಿ ಹಾಗೂ ಕರ್ನಾಟಕ ಜಾನಪದ ಪರಿಷತ್ ನೂತನ ಪದಾಧಿಕಾರಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.


ಯುವಕರು ಜನಪದ ಸಂಸ್ಕೃತಿಯ ರಾಯಭಾರಿಗಳು. ಪ್ರತಿಯೊಬ್ಬರೂ ಜನಪದ ಉಳಿಸಿ ಬೆಳೆಸಲು ಸಂಕಲ್ಪ ತೊಡಬೇಕು ಎಂದು ಹೇಳಿದರು.

ADVERTISEMENT


ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಸಂಯೋಜನಾಧಿಕಾರಿ ಜಗನ್ನಾಥ ಹೆಬ್ಬಾಳೆ ಮಾತನಾಡಿ, ಜಾನಪದ ವಿಶ್ವವಿದ್ಯಾಲಯದ ಕೇಂದ್ರಕ್ಕೆ ಕಮಠಾಣ ಸಮೀಪ ಐದು ಎಕರೆ ಜಮೀನು ಒದಗಿಸಲಾಗಿದೆ. ಅನುದಾನ ಕಲ್ಪಿಸಿದರೆ ಜನಪದ ಸಂಸ್ಕøತಿ ಉಳಿಸಲು ನೆರವಾಗಲಿದೆ ಎಂದು ತಿಳಿಸಿದರು.


ಕನ್ನಡ ಮತ್ತು ಸಂಸ್ಕೃತಿ ಇಲಾಕೆಯ ನಿವೃತ್ತ ಸಹಾಯಕ ನಿರ್ದೇಶಕ ಶಾಂತಕುಮಾರ ಪಾಟೀಲ, ಕರ್ನಾಟಕ ಸಾಹಿತ್ಯ ಸಂಘದ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ, ಮಲ್ಲಿಕಾರ್ಜುನ ಸ್ವಾಮಿ, ಎಸ್.ಬಿ. ಕುಚಬಾಳ, ರಾಜಕುಮಾರ ಹೆಬ್ಬಾಳೆ, ಪ್ರಕಾಶ ಕನ್ನಾಳೆ, ಶಿವಶರಣಪ್ಪ ಗಣೇಶಪುರ, ಮಹಾರುದ್ರ ಡಾಕುಳಗಿ ಇದ್ದರು.


ಸಂಗೀತಾ ಕಾಂಬಳೆ ಹಾಗೂ ದೇವದಾಸ ಚಿಮಕೋಡೆ ಮತ್ತು ಸಂಗಡಿಗರು ಜನಪದ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.