ADVERTISEMENT

17,500 ಕುಟುಂಬಗಳಿಗೆ ಆಹಾರಧಾನ್ಯ

ಜಿಲ್ಲಾ ಪಂಚಾಯಿತಿ ಸಿಇಒ ಝಹೀರಾ ನಸೀಮ್ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 15:10 IST
Last Updated 6 ಜೂನ್ 2021, 15:10 IST
ಬೀದರ್‌ನಲ್ಲಿ ಭಾನುವಾರ ಅಜೀಮ್ ಪ್ರೇಮ್‌ಜಿ ಫೌಂಡೇಶನ್‍ ವತಿಯಿಂದ ಬಡ ಕುಟುಂಬಗಳಿಗೆ ಆಹಾರಧಾನ್ಯ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು
ಬೀದರ್‌ನಲ್ಲಿ ಭಾನುವಾರ ಅಜೀಮ್ ಪ್ರೇಮ್‌ಜಿ ಫೌಂಡೇಶನ್‍ ವತಿಯಿಂದ ಬಡ ಕುಟುಂಬಗಳಿಗೆ ಆಹಾರಧಾನ್ಯ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು   

ಬೀದರ್‌: ಅಜೀಮ್ ಪ್ರೇಮ್‌ಜಿ ಫೌಂಡೇಶನ್‍ ವತಿಯಿಂದ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಯ 17,500 ಬಡ ಕುಟುಂಬಗಳಿಗೆ ಆಹಾರಧಾನ್ಯ ವಿತರಣೆ ಕಾರ್ಯಕ್ಕೆ ನಗರದ ಸೇಂಟ್ ಜೋಸೆಫ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಝಹೀರಾ ನಸೀಮ್ ಚಾಲನೆ ನೀಡಿ ಮಾತನಾಡಿ, ‘ಸಂಕಷ್ಟದ ಸಮಯದಲ್ಲಿ ಅರ್ಬಿಟ್ ಹಾಗೂ ಶಾಹೀನ್ ಸಂಸ್ಥೆ ಸೇರಿ ಒಟ್ಟು 47 ಎನ್.ಜಿ.ಒ.ಗಳು ಈ ಕಾರ್ಯಕ್ಕೆ ಕೈಜೋಡಿಸಿರುವುದು ಸಂತೋಷದ ವಿಷಯವಾಗಿದೆ’ ಎಂದರು.

ಆರ್ಬಿಟ್ ಸಂಸ್ಥೆ, ಶಾಹೀನ್ ಕಾಲೇಜು ಮತ್ತು ಇತರ ಸಂಘ ಸಂಸ್ಥೆಗಳ ಮೂಲಕ ಬೀದರ್‌ ಹಾಗೂ ಕಲಬುರ್ಗಿ ಜಿಲ್ಲೆಯ 17,500 ಬಡ ಕುಟುಂಬಗಳಿಗೆ ಒಂದು ಸಾವಿರ ರೂಪಾಯಿ ಮೌಲ್ಯದ ಆಹಾರಧಾನ್ಯದ ಕಿಟ್‍ಗಳನ್ನು ವಿತರಿಸಲಾಗುತ್ತಿದೆ.

ADVERTISEMENT

ಶಾಹೀನ್ ಶಿಕ್ಷಣ ಸಂಸ್ಥೆಯ ಡಾ. ಅಬ್ದುಲ್ ಖದೀರ್ ಮತ್ತು ಆರ್ಬಿಟ್ ಸಂಸ್ಥೆಯ ಫಾಧರ್ ಅನಿಲ್ ಕ್ರಾಸ್ತಾ, ಫಾದರ್ ವಿಕ್ಟರ್ ದಾಸ್, ಸಂತ ಜೋಸೆ ಫರ ಕಾಲೇಜಿನ ಪ್ರಾಂಶುಪಾಲ ಫಾದರ್ ವಿಲ್ಸನ್ ಫರ್ನಾಂಡೀಸ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.