ಕಮಲನಗರ: ಪಟ್ಟಣದ ಬಸ್ ನಿಲ್ದಾಣದ ಎದುರಿನ ಅಲ್ಲಮಪ್ರಭು ವೃತ್ತದ ಬಳಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಲಾಗುತ್ತಿದೆ. ವ್ಯಾಪಾರಿಗಳು ಪಾದಚಾರಿ ಮಾರ್ಗ ಅಕ್ರಮಿಸಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ.
ಇಲ್ಲಿಂದ ಪ್ರತಿದಿನ ನೂರಾರು ಪ್ರಯಾಣಿಕರು ಪ್ರಯಾಣಿಸುತ್ತಾರೆ. ತೆಲಂಗಾಣ, ಮಹಾರಾಷ್ಟ್ರ ಮತ್ತು ಜಿಲ್ಲೆಯ ಇತರ ತಾಲ್ಲೂಕುಗಳ ಬಸ್ಗಳು ಸಂಚರಿಸುತ್ತವೆ.
ಬಸ್ ನಿಲ್ದಾಣದ ಮುಂದಿನ ಪಾದಚಾರಿ ಮಾರ್ಗವನ್ನು ವ್ಯಾಪಾರಿಗಳು ಸಂಪೂರ್ಣವಾಗಿ ಅಕ್ರಮಿಸಿಕೊಂಡಿದ್ದಾರೆ. ಪಾದಚಾ ರಿಗಳಿಗೆ ದಾರಿ ಇಲ್ಲದಂತಾಗಿದೆ. ಸಂಬಂಧಿಸಿದ ಅಧಿಕಾರಿಗಳು ತೆರವು ಮಾಡಿ ದಾರಿ ಮಾಡಿಕೊಡಬೇಕು ಎಂದು ನಿವಾಸಿ ವಿಠಲರಾವ ಪಾಟೀಲ ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.